Webdunia - Bharat's app for daily news and videos

Install App

ಶೇ.15 ರಷ್ಟು ಬೋಧನಾ ಶುಲ್ಕ ವಾಪಾಸ್‌ ಮಾಡಿ : ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರದ ಆದೇಶ

Webdunia
ಶನಿವಾರ, 13 ನವೆಂಬರ್ 2021 (21:53 IST)
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಡವಾಗಿ ಶಾಲೆಗಳು ಆರಂಭಗೊಂಡಿವೆ. ಶಾಲಾ ಶುಲ್ಕದ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ನಡುವೆ ತಿಕ್ಕಾಟ ನಡೆದು ಕೋರ್ಟ್‌ ಮೆಟ್ಟಿಲೇರಿದ್ದರು. ಆದ್ರೀಗ ರಾಜ್ಯ ಸರಕಾರ ಬೋಧನಾ ಶುಲ್ಕದಲ್ಲಿ (School Fees ) ಶೇ.15ರಷ್ಟು ಹಣವನ್ನು ಮಾತ್ರವೇ ಪಡೆದುಕೊಳ್ಳುವಂತೆ ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2020-21ನೇ ಸಾಲಿನಲ್ಲಿ ರಾಜ್ಯ ಸರಕಾರ ಶಾಲಾ ಶುಲ್ಕದಲ್ಲಿ ಶೇ.30 ರಷ್ಟು ಕಡಿತ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ಶೇ.15ರಷ್ಟು ಬೋಧನಾ ಶುಲ್ಕವನ್ನು ಪಡೆದುಕೊಳ್ಳುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಶಾಲಾ ಶುಲ್ಕವನ್ನು ಪರಿಷ್ಕರಿಸಿ ಹೊಸ ಆದೇಶ ಹೊರಡಿಸಿದೆ.
ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ಹೀಗಾಗಿಯೇ ಪ್ರಸಕ್ತ ಸಾಲಿನಲ್ಲಿ ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿತ್ತು. ಖಾಸಗಿ ಶಾಲೆಗಳು ಶೇ.70ರಷ್ಟು ಶುಲ್ಕವನ್ನು ಮಾತ್ರವೇ ಪಡೆಯಬೇಕು. ಉಳಿದಂತೆ ಯಾವುದೇ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಸೂಚಿಸಿತ್ತು. ಇದೀಗ ಸರಕಾರ ಹೊಸ ಆದೇಶದ ಪ್ರಕಾರ ಶೇ.85 ರಷ್ಟು ಶುಲ್ಕವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ಇನ್ನು ಪೋಷಕರು ಶಾಲೆಗಳಿಗೆ ಶುಲ್ಕ ಪಾವತಿಯನ್ನು ಮಾಡಲು ಕಾಲಾವಕಾಶವನ್ನು ನೀಡಿದೆ. ಎರಡು ಹಂತಗಳಲ್ಲಿ ಈ ಬಾರಿ ಶಾಲಾ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಒಂದೊಮ್ಮೆ ಪೋಷಕರು ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಿದ್ದರೆ, ಅದನ್ನು ಮುಂದಿನ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸರಿದೂಗಿಸುವಂತೆಯೂ ಸೂಚಿಸಿಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments