ಮೂರೇ ತಿಂಗಳಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ: ಶಾಸಕ ಚರಂತಿಮಠ್

Webdunia
ಶನಿವಾರ, 2 ಜೂನ್ 2018 (17:36 IST)
ರಾಜ್ಯದಲ್ಲಿ ರಚನೆಯಾಗಿರುವ ಸಮ್ಮಿಶ್ರ ಸರಕಾರ ಪೂರ್ವ ಕ್ಕೆ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಅಷ್ಟೇ ಮೂರು ತಿಂಗಳ ಕಡಿಮೆ ಆರು ತಿಂಗಳ ಹೆಚ್ಚು ಎನ್ನುವಷ್ಟರಲ್ಲಿ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು  ಬಾಗಲಕೋಟೆಯಲ್ಲಿ ಶಾಸಕ ಡಾ.ವೀರಣ್ಣ ಚರಂತಿಮಠ ಸಂವಾದದಲ್ಲಿ ಹೇಳಿದರು.
ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ಸಚಿವ ಸಂಪುಟ ರಚನೆಯಾಗುವಷ್ಟರಲ್ಲಿ ಕೆಲವೊಂದು ಬದಲಾವಣೆಯಾಗಿ ಬಿಜೆಪಿ ಸರಕಾರ ರಚನೆಗೆ ಪೂರಕವಾಗುತ್ತೆ. ಈಗಾಗಲೇ ಬಿಜೆಪಿ ರಣತಂತ್ರ ರೂಪಿಸಿದೆ ಎಂದರು. 
 
ಬಾಗಲಕೋಟೆ ಮತಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ನಡೆದ ಕಾಮಗಾರಿಗಳ ಅವ್ಯವಹಾರ ತನಿಖೆ ನಡೆಸಲಾಗುವದು. ಜೊತೆಗೆ ಆಲಮಟ್ಟಿ ಆಣೆಕಟ್ಟಿನ 522 ಮೀಟರ್ ಎತ್ತರಿಸುವ ಸಂಬಂಧ ಜಾಗ ಸ್ಥಳಾಂತರಕ್ಕೆ ಬದ್ಧನಾಗಿದ್ದು, ತಹಶೀಲ್ದಾರ ಕಚೇರಿಯಲ್ಲಿನ ಭ್ರಷ್ಟಾಚಾರ ಮಿತಿಮೀರಿದೆ ಅದಕ್ಕೆ ಕಡಿವಾಣ ಹಾಕಲಾಗುವದು ಎಂದು ತಿಳಿಸಿದ್ದಾರೆ. 
 
ನಗರಸಭೆ,  ಬಿಟಿಡಿಎ ಅಡಿಯಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲಿನ ಭ್ರಷ್ಟಾಚಾರ ತೊಡೆದು, ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ. ಇನ್ನು ಪುನರ್ವಸತಿ ಕೇಂದ್ರ ಹಾಗೂ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ ನೀಡಲಾಗುವುದು. ಮತಕ್ಷೇತ್ರದಲ್ಲಿ ಉದ್ಯೋಗ  ಸೃಷ್ಟಿಸಲಾಗುವದು. ಜೊತೆಗೆ ನಗರದಲ್ಲಿ 24 ಗಂಟೆಗಳ ಕಾಲ ನೀರಿನ ಸೌಲಭ್ಯ ಒದಗಿಸಲು ಆದ್ಯತೆ ನೀಡುವುದರೊಂದಿಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡ್ತೇನೆ  ಎಂದು ಶಾಸಕ ಚರಂತಿಮಠ್ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments