Webdunia - Bharat's app for daily news and videos

Install App

ಉಡುಪಿ ನಗರದಲ್ಲಿ ಪ್ಲ್ಯಾಸ್ಟಿಕ್ ಇಲ್ಲದೇ ವಿವಾಹ ಕಾರ್ಯಕ್ರಮ

Webdunia
ಶುಕ್ರವಾರ, 24 ನವೆಂಬರ್ 2017 (15:26 IST)
ಉಡುಪಿ: ಉಡುಪಿ ಜಿಲ್ಲೆಯನ್ನು 2018 ಅಕ್ಟೋಬರ್ 2ರ  ಒಳಗಾಗಿ ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಉಡುಪಿ ಜಿಲ್ಲಾಡಳಿತ ಘನ ಹಾಗೂ ದ್ರವ ಸಂಪನ್ಮೂಲ ನಿರ್ವಹಣೆ (ಎಸ್ ಎಲ್.ಆರ್.ಎಂ) ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಉಡುಪಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಇದರ ಉದ್ದೇಶವಾಗಿತ್ತು.


ಈಗ ಪ್ಲಾಸ್ಟಿಕ್ ಎಲ್ಲರ ಅವಿಭಾಜ್ಯ ಅಂಗವಾಗಿದೆ. ಏನೇ ಕೊಳ್ಳಲು ಹೋದರು ಪ್ಲಾಸ್ಟಿಕ್ ಇಲ್ಲದೇ ವಾಪಾಸ್ ಬರುವುದಿಲ್ಲ. ಆದರೆ ಇಲ್ಲೊಂದು ವಿಶೇಷ ಮದುವೆ ನಡೆದಿದೆ. ಅದೇನಪ್ಪಾ ಅಂದರೆ ಕುಂದಾಪುರ ತಾಲೂಕಿನಲ್ಲಿ ಒಂದು ವಿಶೇಷವಾದ ವಿಮಾಹ ಸಮಾರಂಭವೊಂದು ನಡೆಯಿತು. ಕುಂದಾಪುರ ತಾಲೂಕಿನ ಬಿಜಾಡಿ ಗ್ರಾಮದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶೀತಲ್ ಹಾಗೂ ಅಶ್ವತ್ ಅವರು ಪ್ಲಾಸ್ಟಿಕ್ ನಿರ್ಮೂಲನ ಕಾರ್ಯವನ್ನು ಎತ್ತಿಹಿಡಿಯುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟರು.


ಈ ಸಮಾರಂಭದಲ್ಲಿ ಆಮಂತ್ರಣಾ ಪತ್ರಿಕೆಯಿಂದ ಹಿಡಿದು, ಊಟದ ವ್ಯವಸ್ಥೆಯವರೆಗೂ ಎಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡಲಿಲ್ಲ. ನೈಸರ್ಗಿಕ ಹೂಗಳನ್ನು ಬಳಸಿ ಮದುವೆ ಮಂಟಪವನ್ನು ಸಿಂಗರಿಸಿದರೆ, ನೀರು ಕುಡಿಯಲು ಸ್ಟೀಲ್ ಲೋಟ, ಊಟಕ್ಕೆ ಬಾಳೆ ಎಲೆಯನ್ನು ಬಳಸಲಾಗಿತ್ತು. ವಧು-ವರರ ಸಂಬಂಧಿಕರು ಕೂಡ ಯಾವುದೇ ಪ್ಲಾಸ್ಟಿಕ್ ಚೀಲಗಳ  ಬಳಕೆ ಮಾಡದೇ ಇರುವುದು ವಿಶೇಷವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments