Publish Date: Tue, 27 Sep 2022 (10:09 IST)
Updated Date: Tue, 27 Sep 2022 (10:11 IST)
ಬೆಂಗಳೂರು : ಪಕ್ಷದ ಕೆಲಸ ಮಾಡದ ಪದಾಧಿಕಾರಿಗಳಿಗೆ ಪಕ್ಷದಲ್ಲಿ ಸ್ಥಾನ ಇಲ್ಲ ಅಂತ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಮುಖಂಡರಿಗೆ ಹೆಚ್ಡಿಕೆ ಖಡಕ್ ಎಚ್ಚರಿಕೆ ಕೊಟ್ಟರು. ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ.
ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ.
ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಅಂತ ತಿಳಿಸಿದರು.