Webdunia - Bharat's app for daily news and videos

Install App

100 ರೂಪಾಯಿ, ಬಿರಿಯಾನಿಗಾಗಿ 42 ಬಸ್‌ಗಳಿಗೆ ಬೆಂಕಿ

Webdunia
ಸೋಮವಾರ, 19 ಸೆಪ್ಟಂಬರ್ 2016 (14:44 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮಿಳುನಾಡು ಮೂಲದ ಉದ್ಯಮಪತಿಗೆ ಸೇರಿದ್ದ ಕೆ.ಪಿ.ಎನ್ ಟ್ರಾವೆಲ್ಸ್‌ನ 42 ಬಸ್‌ಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಬಂಧಿತಳಾಗಿರುವ ಯಾದಗಿರಿ ಮೂಲದ ಯುವತಿ ನೀಡಿರುವ ಹೇಳಿಕೆ ನಿಮ್ಮನ್ನು ಒಂದು ಕ್ಷಣ ಆಘಾತಕ್ಕೆ ದೂಡದೇ ಬಿಡದು.

ಸೆಪ್ಟೆಂಬರ್ 12 ರ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿರುವ 11 ಜನರಲ್ಲಿ ಒಬ್ಬಳಾಗಿರುವ ಸಿ. ಭಾಗ್ಯಳಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ 100 ರೂಪಾಯಿ ಮತ್ತು ಒಂದು ಪ್ಲೇಟ್ ಬಿರಿಯಾನಿ ಕೊಡಿಸುವುದಾಗಿ ಹೇಳಿ ಒಪ್ಪಿಸಲಾಗಿತ್ತು ಎಂಬ ದಂಗು ಬಡಿಸುವ ಸತ್ಯವನ್ನು ಹೊರಬಿದ್ದಿದೆ.
 
ಸಂಘಟನೆಯೊಂದರ ಜತೆ ಗುರುತಿಸಿಕೊಂಡಿರುವ ಭಾಗ್ಯ  ಬಸ್‌ಗಳಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ತಾನು ಅಲ್ಲಿರುವುದನ್ನು ಒಪ್ಪಿಕೊಂಡಿದ್ದಾಳೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ.
 
100 ರೂಪಾಯಿ ಮತ್ತು 1 ಪ್ಲೇಟ್ ಮಟನ್ ಬಿರಿಯಾನಿ ಕೊಡಿಸುವುದಾಗಿ ಹೇಳಿ ನನ್ನ ಮಗಳ ಸ್ನೇಹಿತರು ಆಕೆಯನ್ನು ಪುಸಲಾಯಿಸಿದ್ದರು ಎಂದು ಭಾಗ್ಯ ತಾಯಿ ಎಲ್ಲಮ್ಮ ಹೇಳಿದ್ದಾಳೆ. ತನ್ನ ಪೋಷಕರ ಜತೆ ಗಿರಿನಗರದಲ್ಲಿ ವಾಸಿಸುವ ಭಾಗ್ಯ ದಿನಗೂಲಿ ಕಾರ್ಮಿಕಳಾಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments