Webdunia - Bharat's app for daily news and videos

Install App

100 ರೂಪಾಯಿ, ಬಿರಿಯಾನಿಗಾಗಿ 42 ಬಸ್‌ಗಳಿಗೆ ಬೆಂಕಿ

Webdunia
ಸೋಮವಾರ, 19 ಸೆಪ್ಟಂಬರ್ 2016 (14:44 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮಿಳುನಾಡು ಮೂಲದ ಉದ್ಯಮಪತಿಗೆ ಸೇರಿದ್ದ ಕೆ.ಪಿ.ಎನ್ ಟ್ರಾವೆಲ್ಸ್‌ನ 42 ಬಸ್‌ಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಬಂಧಿತಳಾಗಿರುವ ಯಾದಗಿರಿ ಮೂಲದ ಯುವತಿ ನೀಡಿರುವ ಹೇಳಿಕೆ ನಿಮ್ಮನ್ನು ಒಂದು ಕ್ಷಣ ಆಘಾತಕ್ಕೆ ದೂಡದೇ ಬಿಡದು.

ಸೆಪ್ಟೆಂಬರ್ 12 ರ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿರುವ 11 ಜನರಲ್ಲಿ ಒಬ್ಬಳಾಗಿರುವ ಸಿ. ಭಾಗ್ಯಳಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ 100 ರೂಪಾಯಿ ಮತ್ತು ಒಂದು ಪ್ಲೇಟ್ ಬಿರಿಯಾನಿ ಕೊಡಿಸುವುದಾಗಿ ಹೇಳಿ ಒಪ್ಪಿಸಲಾಗಿತ್ತು ಎಂಬ ದಂಗು ಬಡಿಸುವ ಸತ್ಯವನ್ನು ಹೊರಬಿದ್ದಿದೆ.
 
ಸಂಘಟನೆಯೊಂದರ ಜತೆ ಗುರುತಿಸಿಕೊಂಡಿರುವ ಭಾಗ್ಯ  ಬಸ್‌ಗಳಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ತಾನು ಅಲ್ಲಿರುವುದನ್ನು ಒಪ್ಪಿಕೊಂಡಿದ್ದಾಳೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ.
 
100 ರೂಪಾಯಿ ಮತ್ತು 1 ಪ್ಲೇಟ್ ಮಟನ್ ಬಿರಿಯಾನಿ ಕೊಡಿಸುವುದಾಗಿ ಹೇಳಿ ನನ್ನ ಮಗಳ ಸ್ನೇಹಿತರು ಆಕೆಯನ್ನು ಪುಸಲಾಯಿಸಿದ್ದರು ಎಂದು ಭಾಗ್ಯ ತಾಯಿ ಎಲ್ಲಮ್ಮ ಹೇಳಿದ್ದಾಳೆ. ತನ್ನ ಪೋಷಕರ ಜತೆ ಗಿರಿನಗರದಲ್ಲಿ ವಾಸಿಸುವ ಭಾಗ್ಯ ದಿನಗೂಲಿ ಕಾರ್ಮಿಕಳಾಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments