Webdunia - Bharat's app for daily news and videos

Install App

ಸಾವಿನಲ್ಲೂ ಪತಿಯನ್ನು ಹಿಂಬಾಲಿಸಿದ ಸತಿ

Webdunia
ಶುಕ್ರವಾರ, 17 ಫೆಬ್ರವರಿ 2017 (16:49 IST)
ಪತಿಯ ಸಾವಿನಿಂದ ನೊಂದಿದ್ದ ಪತ್ನಿ, ಆತನ ಅಗಲಿಕೆ ನೋವನ್ನು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.

25 ವರ್ಷದ ನಂದಿನಿ ಅಲಿಯಾಸ್ ನಂಜಮ್ಮ ಎಂದು ಮೃತ ಮಹಿಳೆಯಾಗಿದ್ದಾರೆ. ವೆಂಕಟಗಿರಿ ಕೋಟೆ ಬಳಿಯ ಟ್ಯಾಂಕ್ ಬಂಡೆ ರಸ್ತೆಯಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
 
ಘಟನೆ ವಿವರ: ಬೆಂಗಳೂರಿನ ಆವಲಹಳ್ಳಿ ಬಳಿಯ ಎಟಿಎಂ ಒಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಆನಂದಾಚಾರಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ತಿಳಿದ ಪತ್ನಿ ಬೆಂಗಳೂರಿಗೆ ಧಾವಿಸಿ ನಿಂತಿದ್ದಾಳೆ. ಅಷ್ಟರಲ್ಲಿ ಆತ ಸಾವನ್ನಪ್ಪಿದ ಸುದ್ದಿ ಹರಿದು ಬಂದಿದ್ದು, ಅದನ್ನು ಸಹಿಸಲಾಗದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
 
ಒಂದೇ ದಿನ ಮಗ ಸೊಸೆಯನ್ನು ಕಳೆದುಕೊಂಡ ಆನಂದಾಚಾರಿ ಕುಟುಂಬದ ದುಃಖ ಮುಗಿಲು ಮುಟ್ಟಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments