ನೋಟುಗಳ ವಿನಿಮಯದ ವೇಳೆ ಹಣ ಕಳ್ಕೊಂಡಿದ್ದಕ್ಕೆ ಬೇಸತ್ತುಕೊಂಡ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಗುಡಿಬಂಡೆ ತಾಲ್ಲೂಕಿನ ಚೆಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನಿನ್ನೆ ಈಶ್ವರಮ್ಮ ಹಣ ವಿನಿಮಯ ಮಾಡಿಕೊಳ್ಳಲು ಗುಡಿಬಂಡೆಯಲ್ಲಿರುವ ಪ್ರಗತಿ ಗ್ರಾಮೀಣ ಬ್ಯಾಂಕ್ಗೆ ಹೋಗಿದ್ದರು. ನೂಕು ನುಗ್ಗಲಿನಲ್ಲಿ ಆಕೆ ಹಣವನ್ನು ಕಳೆದುಕೊಂಡಿದ್ದು, ಈ ಕುರಿತು ಬ್ಯಾಂಕ್ನವರಿಗೆ ದೂರು ನೀಡಿದಾಗ ಅವರು ನಮ್ಮಲ್ಲಿ ಸಿಸಿ ಕ್ಯಾಮರಾ ಇಲ್ಲವೆಂದು ಹೇಳಿದ್ದಾರೆ.
ಕಳೆದ 6 ತಿಂಗಳ ಹಿಂದೆ ಮನೆಯನ್ನು ಕಳೆದುಕೊಂಡಿದ್ದ ಈಶ್ವರಮ್ಮ ಮತ್ತೀಗ ಇದ್ದ ಹಣವನ್ನು ಸಹ ಕಳೆದುಕೊಂಡು ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಗುಡಿಬಂಡೆ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.