Select Your Language

Notifications

webdunia
webdunia
webdunia
webdunia

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು..!

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು..!
bangalore , ಶುಕ್ರವಾರ, 17 ನವೆಂಬರ್ 2023 (15:23 IST)
ವೈದ್ಯರ ನಿರ್ಲಕ್ಷ್ಯ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನಡೆದಿದೆ.
34 ವರ್ಷದ ನಾಜ್ನಿ‌ ಮೃತ ಮಹಿಳೆಯಾಗಿದ್ದು, ಆಸ್ಪತ್ರೆಯ ಮುಂದೆ ಆಂಬ್ಯುಲೆನ್ಸ್‌ನಲ್ಲಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ಹೊಟ್ಟೆ ನೋವು ಎಂದು ನಾಜ್ನಿ ಆಸ್ಪತ್ರೆಗೆ ದಾಖಲಾಗಿದ್ರು.

ಆದ್ರೆ ಎರಡು ದಿನಗಳವರಗೆ ಆಪರೇಷನ್ ಮಾಡದೇ ವೈದ್ಯರು ನಿರ್ಲಕ್ಷ್ಯವಹಿಸಿ, ಬಳಿಕ ಕೂಡಲೇ ಆಪರೇಷನ್ ಮಾಡಬೇಕೆಂದು ಹೇಳಿದ್ದಾರೆ. ಬಳಿಕ ಬೆಳ್ಳಂಬೆಳ್ಳಗ್ಗೆ ಆಪರೇಷನ್ ಮಾಡಿದ ವೈದ್ಯರು, ಆಪರೇಷನ್ 2 ದಿನ ನಿಗಾವಹಿಸಬೇಕೆಂದು ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ಸಂಜೆವರೆಗೂ ಐಸಿಯೂನಲ್ಲೇ ಚಿಕಿತ್ಸೆ ನೀಡಿದ ವೈದ್ಯರು ಇದ್ದಕ್ಕಿಂದ್ದಂತೆ ಬಂದು, ಮಹಿಳೆಗೆ ನರದಲ್ಲಿ ಸಮಸ್ಯೆಯಿದೆ ಇಲ್ಲಿ ಚಿಕಿತ್ಸೆ ನೀಡೋಕೆ ಸಾಧ್ಯವಿಲ್ಲ ಬೇರೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.

ಈ ವೇಳೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬ್ಯುಲೆನ್ಸ್‌ನಲ್ಲೇ ಮಹಿಳೆ ಪ್ರಾಣಬಿಟ್ಟಿದ್ದು, ವೈದ್ಯರ ನಿರ್ಲಕ್ಷಕ್ಕೆ ಸಾವಾಗಿದೆ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ. ಆಪರೇಷನ್ ಮಾಡಿದ ವೈದ್ಯರು ಸ್ಥಳಕ್ಕೇ ಬರಬೇಕು, ನ್ಯಾಯ ಸಿಗುವವರೆಗೂ ಇಲ್ಲಿಂದ ಮೃತದೇಹ ತೆಗೆಯಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಶೇ.35 ರಷ್ಟು ಮಳೆ ಕೊರತೆ