ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು..!

Webdunia
ಶುಕ್ರವಾರ, 17 ನವೆಂಬರ್ 2023 (15:23 IST)
ವೈದ್ಯರ ನಿರ್ಲಕ್ಷ್ಯ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನಡೆದಿದೆ.
34 ವರ್ಷದ ನಾಜ್ನಿ‌ ಮೃತ ಮಹಿಳೆಯಾಗಿದ್ದು, ಆಸ್ಪತ್ರೆಯ ಮುಂದೆ ಆಂಬ್ಯುಲೆನ್ಸ್‌ನಲ್ಲಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೂರು ದಿನಗಳ ಹಿಂದೆ ಹೊಟ್ಟೆ ನೋವು ಎಂದು ನಾಜ್ನಿ ಆಸ್ಪತ್ರೆಗೆ ದಾಖಲಾಗಿದ್ರು.

ಆದ್ರೆ ಎರಡು ದಿನಗಳವರಗೆ ಆಪರೇಷನ್ ಮಾಡದೇ ವೈದ್ಯರು ನಿರ್ಲಕ್ಷ್ಯವಹಿಸಿ, ಬಳಿಕ ಕೂಡಲೇ ಆಪರೇಷನ್ ಮಾಡಬೇಕೆಂದು ಹೇಳಿದ್ದಾರೆ. ಬಳಿಕ ಬೆಳ್ಳಂಬೆಳ್ಳಗ್ಗೆ ಆಪರೇಷನ್ ಮಾಡಿದ ವೈದ್ಯರು, ಆಪರೇಷನ್ 2 ದಿನ ನಿಗಾವಹಿಸಬೇಕೆಂದು ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ಸಂಜೆವರೆಗೂ ಐಸಿಯೂನಲ್ಲೇ ಚಿಕಿತ್ಸೆ ನೀಡಿದ ವೈದ್ಯರು ಇದ್ದಕ್ಕಿಂದ್ದಂತೆ ಬಂದು, ಮಹಿಳೆಗೆ ನರದಲ್ಲಿ ಸಮಸ್ಯೆಯಿದೆ ಇಲ್ಲಿ ಚಿಕಿತ್ಸೆ ನೀಡೋಕೆ ಸಾಧ್ಯವಿಲ್ಲ ಬೇರೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.

ಈ ವೇಳೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬ್ಯುಲೆನ್ಸ್‌ನಲ್ಲೇ ಮಹಿಳೆ ಪ್ರಾಣಬಿಟ್ಟಿದ್ದು, ವೈದ್ಯರ ನಿರ್ಲಕ್ಷಕ್ಕೆ ಸಾವಾಗಿದೆ ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ. ಆಪರೇಷನ್ ಮಾಡಿದ ವೈದ್ಯರು ಸ್ಥಳಕ್ಕೇ ಬರಬೇಕು, ನ್ಯಾಯ ಸಿಗುವವರೆಗೂ ಇಲ್ಲಿಂದ ಮೃತದೇಹ ತೆಗೆಯಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments