Webdunia - Bharat's app for daily news and videos

Install App

ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾವು

Webdunia
ಭಾನುವಾರ, 23 ಅಕ್ಟೋಬರ್ 2022 (17:44 IST)
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ನಿಹಾರಿಕಾ ಮೃತ ಪಟ್ಟ ಮಹಿಳೆಯಾಗಿದ್ದಾಳೆ. ಈಕೆಯದ್ದು ಸಹಜ ಸಾವಲ್ಲ, ಆಕೆಯ ಪತಿ ಈಕೆಯನ್ನು ಕೊಲೆ ಮಾಡಿದ್ದಾನೆ ಎಂದು ನಿಹಾರಿಕಾಳ ಪೋಷಕರು ಆರೋಪ ಮಾಡ್ತಿದ್ದಾರೆ. ನಿಹಾರಿಕಾಳ ಪತಿ ಕಾರ್ತಿಕ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. 4 ತಿಂಗಳ ಹಿಂದೆ ನಿಹಾರಿಕ ಕಾರ್ತಿಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ಆದರೆ ಈಕೆಗೆ ಪ್ರತಿನಿತ್ಯವು ಸತತವಾಗಿ ಗಂಡ ಕಿರುಕುಳ ನೀಡುತ್ತಿದ್ದ ಎಂಬ ಕಾರಣಕ್ಕೆ, ಅಕ್ಕನ ಮನೆ ಸೇರಿದ್ದಳು. ಕಳೆದ 2 ದಿನಗಳ ಹಿಂದೆ ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಕಾರ್ತಿಕ್ ಮನೆಗೆ ಕರದುಕೊಂಡು ಬಂದಿದ್ದ.  ಇನ್ನು ನಿಹಾರಿಕ  ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ಶಾಲೆಯ ಕಾರ್ಯಕ್ರಮಕ್ಕೆ ತೆರಳುವ ವಿಚಾರವಾಗಿ ನಿಹಾರಿಕಗೆ ಕಾರ್ತಿಕ ನಿಂದಿಸಿದನು. ಈ ವೇಳೆ ಕಾರ್ತಿಕ ಹಾಗೂ ನಿಹಾರಿಕ ನಡುವೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾನೆ ಎಂದು ನಿಹಾರಿಕಾ ಪೋಷಕರು ಆರೋಪಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಕಾರ್ತಿಕನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದು, ಸಾವಿಗೆ ಕಾರಣವೇನು ಎಂಬುವುದು ವಿಚಾರಣೆಯ ನಂತರ ತಿಳಿದು ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments