17 ವರ್ಷದ ಬಾಲಕನೊಂದಿಗೆ 24ರ ಅಂಟಿ ಪರಾರಿ:ಇದೊಂದು ವಿಚಿತ್ರ ಘಟನೆ

Webdunia
ಶನಿವಾರ, 18 ನವೆಂಬರ್ 2017 (15:57 IST)
17 ವರ್ಷದ ಬಾಲಕನನ್ನು ಅಪಹರಿಸಿದ 24 ವರ್ಷ ವಯಸ್ಸಿನ ಗೃಹಿಣಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. 
 
ಇಬ್ಬರು ಬೆಂಗಳೂರಿನಿಂದ 95 ಕಿ.ಮೀ ದೂರದಲ್ಲಿರುವ ಕೆಜಿಎಫ್‌ ನಗರದ ನಿವಾಸಿಗಳಾಗಿದ್ದಾರೆ. ಒಂದೇ ಬಡಾವಣೆಯಲ್ಲಿ ವಾಸಿಸುತ್ತಿದ್ದರಿಂದ ಚಿರಪರಿಚಿತರಾಗಿದ್ದರು. ಇಬ್ಬರ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿತ್ತು.
 
ಆರೋಪಿ ಮಹಿಳೆಯ ಪತಿ ಕುಡಿಯುವ ಟ್ಯಾಂಕರ್ ನೀರು ಸರಬರಾಜು ಮಾಡುವ ವೃತ್ತಿಯಲ್ಲಿದ್ದಾನೆ. ವಿವಾಹವಾಗಿ ಎರಡು ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ. ಮಹಿಳೆಯ ಜೊತೆ ಪರಾರಿಯಾಗಿದ್ದ ಬಾಲಕ ಓದುವುದು ಬಿಟ್ಟಿದ್ದನು ಎಂದು ಮೂಲಗಳು ತಿಳಿಸಿವೆ.
 
ತನಿಖಾಧಿಕಾರಿಗಳ ಪ್ರಕಾರ, ಇಬ್ಬರು ಅಕ್ಟೋಬರ್ 24 ರಂದು ಕಾಣೆಯಾಗಿದ್ದರು. ಮಹಿಳೆಯ ಪತಿ ರಾತ್ರಿಯೇ ರಾಬರ್ಟ್ಸನ್ ಪೊಲೀಸ್ ಠಾಣೆಗೆ ತೆರಳಿ ಪತ್ನಿ 1.50 ಲಕ್ಷ ರೂ.ತೆಗೆದುಕೊಂಡು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಮಾರನೇ ದಿನ ಬೆಳಿಗ್ಗೆ ಬಾಲಕನ ತಂದೆ ಕೂಡಾ ಮಗ ಕಾಣೆಯಾದ ಬಗ್ಗೆ ದೂರು ನೀಡಿದ್ದರು ಎಂದು ತಿಳಿಸಿದ್ದಾರೆ.
 
ಶೀಘ್ರದಲ್ಲೇ, ಗೃಹಿಣಿಯ ಮೊಬೈಲ್ ಫೋನ್ ಕರೆಗಳನ್ನು ಪತ್ತೆಹಚ್ಚಲು ಪೊಲೀಸರು ಪ್ರಾರಂಭಿಸಿದರು. ಇಬ್ಬರೂ ಪ್ರತಿದಿನ  ಸ್ಥಳಾಂತರಗೊಳ್ಳುತ್ತಿದ್ದರು, ವಿಶಾಖಪಟ್ಟಣಂ, ವಿಜಯವಾಡಾ, ನೆಲ್ಲೂರು ಮತ್ತು ತಮಿಳುನಾಡಿನ ಮಹಾಬಲೀಪುರಂ ಸೇರಿದಂತೆ ಕೆಲವು ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಡಿದರು, ಅಲ್ಲಿ ಅವರು ವಸತಿ ನಿಲಯಗಳಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
 
 ಅಂತಿಮವಾಗಿ, ಪೊಲೀಸರು ನವೆಂಬರ್ 13 ರಂದು ತಮಿಳುನಾಡಿನ ವೇಲನ್‌ಕಣ್ಣಿ ಪಟ್ಟಣದಲ್ಲಿರುವ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ ಮತ್ತು ಬಾಲಕನನ್ನು ಬಂಧಿಸಲಾಯಿತು.
  
ಬಾಲಕ ಅಪ್ರಾಪ್ತನಾಗಿದ್ದು ಆತನೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಂಡಿರುವುದು ಅಪರಾಧವಾಗಿದೆ ಎಂದು ಮಹಿಳೆಗೆ ಪೊಲೀಸರು ತಿಳಿಹೇಳಿದರೂ ಪ್ರಯೋಜನವಾಗಲಿಲ್ಲ. ನಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಶೀಘ್ರದಲ್ಲಿಯೇ ಮದುವೆಯಾಗಲಿದ್ದೇವೆ ಎಂದು ಮಹಿಳೆ ತಿಳಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments