Webdunia - Bharat's app for daily news and videos

Install App

ಧರ್ಮಸ್ಥಳ ಸಂಘದ ಸಾಲದ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಹಿಳೆ

Krishnaveni K
ಶುಕ್ರವಾರ, 20 ಸೆಪ್ಟಂಬರ್ 2024 (10:13 IST)
ಮಂಡ್ಯ: ಇತ್ತಿಚೆಗಷ್ಟೇ ಶಾಸಕ ನರೇಂದ್ರಸ್ವಾಮಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ನಿಯಮ ಮೀರಿ ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಈಗ ಅವರದೇ ಕ್ಷೇತ್ರದ ಮಹಿಳೆಯೊಬ್ಬರು ಸಂಘದ ಸಾಲದ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ 35 ವರ್ಷದ ಮಹಿಳೆಯ ಮಹಾಲಕ್ಷ್ಮಿ ಎಂಬಾಕೆ ಸಾಲದ ಕಂತು ಕಟ್ಟಲಾಗದೇ ನೇಣಿಗೆ ಶರಣಾಗಿದ್ದಾಳೆ. ಈ ಬಗ್ಗೆ ಆಕೆಯ ಪತಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಪತ್ನಿಯ ಸಾವಿಗೆ ಸಾಲದ ಕಂತಿನ ಹಣ ಕಟ್ಟುವಂತೆ ಗ್ರಾಮೀಣಾಭಿವೃದ್ಧಿ ಸಂಘದವರು ನೀಡಿದ ಕಿರುಕುಳವೇ ಕಾರಣ ಎಂದಿದ್ದಾರೆ.

ಐದು ತಿಂಗಳ ಹಿಂದೆ ನನ್ನ ಪತ್ನಿ ಧರ್ಮಸ್ಥಳ ಸಂಘದಲ್ಲಿ 2 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ಬುಧವಾರ 1,700 ರೂ. ಕಟ್ಟಬೇಕಿತ್ತು. ಸಂಸ್ಥೆಯ ಪ್ರತಿನಿಧಿಯೊಬ್ಬರು ಮನೆಯ ಬಳಿ ಬಂದು ಕೂಡಲೇ ಕಂತಿನ ಹಣ ಕಟ್ಟುವಂತೆ ಅವಾಚ್ಯ ಶಬ್ಧಗಳಿಂದ ನಿಂದಿದ್ದರು. ಇದರಿಂದ ಮನನೊಂದು ಪತ್ನಿ ನೇಣಿಗೆ ಶರಣಾಗಿದ್ದಾಳೆ ಎಂದು ಪತಿ ದೂರಿನಲ್ಲಿ ವಿವರಿಸಿದ್ದಾರೆ.

ಇತ್ತೀಚೆಗೆ ಶಾಸಕ ನರೇಂದ್ರ ಸ್ವಾಮಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧ ಸಂಸ್ಥೆ ಅಧಿಕ ಬಡ್ಡಿಗೆ ಸಾಲ ನೀಡುತ್ತಿದೆ. ಹೆಸರಿಗೆ ಧರ್ಮಸ್ಥಳ  ಅಲ್ಲಿ ನಡೆಯುತ್ತಿರುವುದೆಲ್ಲಾ ಅಧರ್ಮ. ಹೀಗಾಗಿ ಜನ ಸರ್ಕಾರದ ಸಾಲದ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದಿದ್ದರು. ಅವರು ಹೇಳಿ ವಾರ ಕಳೆಯುವಷ್ಟರಲ್ಲಿ ಅವರದೇ ಕ್ಷೇತ್ರದಲ್ಲಿ ಇಂತಹದ್ದೊಂದು ಘಟನೆ ನಡೆದಿರುವುದು ದುರದೃಷ್ಟಕರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments