Webdunia - Bharat's app for daily news and videos

Install App

ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

Webdunia
ಶುಕ್ರವಾರ, 2 ಡಿಸೆಂಬರ್ 2022 (20:27 IST)
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ವಿಷ ಉಣಿಸಿ ಮಹಿಳೆ ತಾನೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಉಸ್ನಾ ಕೌಸರ್ ಎಂಬಾಕೆ ತನ್ನ 3 ಜನ ಮಕ್ಕಳಿಗೆ ವಿಷ ಉಣಿಸಿ ,ಕಣ್ಣೆದುರೇ ಮಕ್ಕಳು ಮೃತಪಟ್ಟ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧ ಹೊಂದಿದ್ದು, ಈತ ಪರ ಸ್ತ್ರೀ ಜೊತೆ ಬೆತ್ತಲೆ ಇದ್ದ ಫೋಟೋಗಳು ಪತ್ತೆಯಾಗಿದ್ದವು. ಇದನ್ನು ನೋಡಿದ ಪತ್ನಿ ಕೌಸರ್ ಪ್ರಶ್ನೆ ಮಾಡಿದ್ದಳು. ಈ ಕಾರಣಕ್ಕೆ ಮನೆಯಲ್ಲಿ ಜೋರು ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಪೋಷಕರು ಇಬ್ಬರನ್ನು ರಾಜಿ ಮಾಡಿದ್ದರು. ನಂತರ ಪತಿ ಅಖಿಲ್ ಅಹಮದ್ ಅಕ್ರಮ ಸಂಬಂಧ ಬಿಡುವುದಾಗಿ‌ ಹೇಳಿದ್ದ. ಉರುಫ್ ಹಿನ್ನೆಲೆ ಬೇಗ ಮನೆಗೆ ಬರ್ತೀನಿ ಎಂದು ಅಖಿಲ್ ಕೆಲಸಕ್ಕೆ‌ ಹೋಗಿದ್ದ. ಆದರೆ ಸಂಜೆ ಆದರೂ ಮನೆಗೆ ಬೇಗ ಬಾರದೆ ಇದ್ದಾಗ ಕೌಸರ್ ಮತ್ತು ಅಖಿಲ್ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ. ಕೌಸರ್ ಮನನೊಂದು ಕೆಲಸದಿಂದ ಮನೆಗೆ ಬಂದು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಅಖಿಲ್ ಅಹಮದ್ ಹಾಗೂ ಕುಟುಂಬ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲೀಸರು ಪರೀಶೀಲನೆ ನಡೆಸಿದ್ದಾರೆ. ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related News

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ