Webdunia - Bharat's app for daily news and videos

Install App

ಸುಳ್ಳು ಹೇಳಿ ಪಾಸ್ ಪಡೆದ ಮಹಿಳೆ : 6 ಮಂದಿ ವಿರುದ್ಧ ಎಫ್ ಐ ಆರ್

Webdunia
ಭಾನುವಾರ, 19 ಏಪ್ರಿಲ್ 2020 (15:28 IST)
ವೈದ್ಯಕೀಯ ಪಾಸ್ ನ್ನು ಸುಳ್ಳು ಮಾಹಿತಿ ನೀಡಿ ಸಂಚಾರ ಮಾಡಿದವರ ವಿರುದ್ಧ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುಳ್ಳು ಮಾಹಿತಿ ನೀಡಿ ವೈದ್ಯಕೀಯ ಪಾಸ್ ಪಡೆದು ಕೊಡಗು ಪ್ರವೇಶಿಸಿ ಹೋಮ್ಸ್ ಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದ ಬೆಂಗಳೂರು ಹಾಗೂ ತುಮಕೂರು ಮೂಲದ ಐವರು ಹಾಗೂ ಹೋಮ್ಸ್ ಸ್ಟೇ ಮಾಲಿಕನ‌ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಜಿಲ್ಲಾ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಡುವ ಚಿನ್ನಪ್ಪ ಮಾಲಿಕತ್ವದ  ರಿವರ್ ವ್ಯಾಲಿ ಬಂಗಲೋ ಹೋಮ್ಸ್ ಸ್ಟೇಗೆ 15 ದಿನಗಳ ಹಿಂದೆ ತುಮಕೂರು ಮೂಲದ ಇಬ್ಬರು ವ್ಯಕ್ತಿಗಳು ಬೆಂಗಳೂರಿನಿಂದ ಬಂದು ವಾಸ್ತವ್ಯ ಹೂಡಿರುವುದು ಕಂಡುಬಂದಿದೆ.ಅವರನ್ನು ಹೋಮ್ಸ್ ಸ್ಟೇನಲ್ಲಿಯೇ ಕ್ವಾರಂಟೈನ್ ಮಾಡಿ ಹೋಮ್ಸ್ ಸ್ಟೇ ಮಾಲಿಕರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದಾದ ಬಳಿಕ ಏ.17 ರಂದು ಬೆಂಗಳೂರು ಮೂಲದ ಒಬ್ಬರು ಮಹಿಳೆ ಬೆಂಗಳೂರು ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ವೈದ್ಯಕೀಯ ಪಾಸ್ ಪಡೆದು ತುಮಕೂರು ಮೂಲದ ಓರ್ವ ವ್ಯಕ್ತಿ ಹಾಗೂ ಮಹಿಳೆಯೊಂದಿಗೆ ರಿವರ್ ವ್ಯಾಲಿ ಬಂಗಲೋ ಹೋಮ್ಸ್ ಸ್ಟೇಗೆ ಬಂದು ವಾಸ್ತವ್ಯ ಹೂಡಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ, ಹೊದ್ದೂರು ಪಂಚಾಯತ್ ಅಧಿಕಾರಿ  ನೇತೃತ್ವದಲ್ಲಿ ದಾಳಿ ನಡೆಸಿ ಅನಧಿಕೃತವಾಗಿ ವಾಸ್ತವ್ಯ ಹೂಡಿದ್ದ ಐವರು ಹಾಗೂ ಹೋಮ್ಸ್ ಸ್ಟೇ ಮಾಲಿಕರನ್ನು ವಶಕ್ಕೆ ಪಡೆದು ಸೀಲ್ ಮಾಡಿ ಜಿಲ್ಲಾ ಕ್ವಾರಂಟೈನ್‌ಗೆ ಸೇರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments