ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿರುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಮಂಡ್ಯ ಬಳಿಯ ರೈಲು ನಿಲ್ದಾಣದಲ್ಲಿ ರೈಲು ನಿಧಾನವಾಗಿ ಚಲಿಸುತ್ತಿರುವ ಸಂದರ್ಭದಲ್ಲಿ ಇಳಿಯಲು ಯತ್ನಿಸಿದಾಗ ಆಯ ತಪ್ಪಿ ಆಕೆಯ ಕಾಲುಗಳು ಚಕ್ರದಡಿ ಸಿಲುಕಿ ತುಂಡಾಗಿವೆ ಎಂದು ಮೂಲಗಳು ತಿಳಿಸಿವೆ.
ಮಹಿಳೆ ರೈಲಿನಿಂದ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿದ್ದ ಸಹೋದರ ಅವಸರ ಮಾಡಿದ್ದರಿಂದ, ಆಯ ತಪ್ಪಿ ಕೆಳೆಗೆ ಬಿದ್ದಾಗ ಆಕೆಯ ಕಾಲುಗಳು ರೈಲಿನ ಚಕ್ರಕ್ಕೆ ಸಿಲುಕಿ ತುಂಡಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಮುಂಬೈನ ಬೋರಿವಿಲಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಅವಸರದಲ್ಲಿ ರೈಲಿನಿಂದ ಇಳಿಯುತ್ತಿರುವಾಗ ರೈಲಿನ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿರುವುದನ್ನು ಸ್ಮರಿಸಬಹುದು.