Webdunia - Bharat's app for daily news and videos

Install App

ರೈಲಿನಿಂದ ಅವಸರದಲ್ಲಿ ಇಳಿಯಲು ಹೋಗಿ ಕಾಲು ಕಳೆದುಕೊಂಡ ಮಹಿಳೆ

Webdunia
ಶುಕ್ರವಾರ, 5 ಫೆಬ್ರವರಿ 2016 (16:37 IST)
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿರುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಮಂಡ್ಯ ಬಳಿಯ ರೈಲು ನಿಲ್ದಾಣದಲ್ಲಿ ರೈಲು ನಿಧಾನವಾಗಿ ಚಲಿಸುತ್ತಿರುವ ಸಂದರ್ಭದಲ್ಲಿ ಇಳಿಯಲು ಯತ್ನಿಸಿದಾಗ ಆಯ ತಪ್ಪಿ ಆಕೆಯ ಕಾಲುಗಳು ಚಕ್ರದಡಿ ಸಿಲುಕಿ ತುಂಡಾಗಿವೆ ಎಂದು ಮೂಲಗಳು ತಿಳಿಸಿವೆ.
 
ಮಹಿಳೆ ರೈಲಿನಿಂದ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿದ್ದ ಸಹೋದರ ಅವಸರ ಮಾಡಿದ್ದರಿಂದ, ಆಯ ತಪ್ಪಿ ಕೆಳೆಗೆ ಬಿದ್ದಾಗ ಆಕೆಯ ಕಾಲುಗಳು ರೈಲಿನ ಚಕ್ರಕ್ಕೆ ಸಿಲುಕಿ ತುಂಡಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
 
ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಕಳೆದ ವಾರ ಮುಂಬೈನ ಬೋರಿವಿಲಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಅವಸರದಲ್ಲಿ ರೈಲಿನಿಂದ ಇಳಿಯುತ್ತಿರುವಾಗ ರೈಲಿನ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿರುವುದನ್ನು ಸ್ಮರಿಸಬಹುದು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments