Webdunia - Bharat's app for daily news and videos

Install App

ಬಸ್‌ಗೆ ಬೆಂಕಿ: ಗಾಯಗೊಂಡಿದ್ದ ಮಮತಾ ಸಾವು

Webdunia
ಶನಿವಾರ, 25 ಫೆಬ್ರವರಿ 2017 (14:01 IST)
ನೆಲಮಂಗಲದ ಬಳಿ ಸೋಮವಾರ ಸಂಭವಿಸಿದ ಬಸ್ ಅಗ್ನಿದುರಂತದಲ್ಲಿ ಗಾಯಗೊಂಡಿದ್ದ ಮಮತಾ ಕೊನೆಯುಸಿರೆಳೆದಿದ್ದಾರೆ.
ಹಾಸನ ಜಿಲ್ಲೆ ವೀರಾಪುರ ಗ್ರಾಮದ ಮಮತಾ  70 ಪ್ರತಿಶತ ಸುಟ್ಟ ಗಾಯಗಳಿಂದ ಬಳಲುತ್ತಿದ್ದು,  ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ  ಅವರ ಪುತ್ರ 5 ವರ್ಷದ  ಯಶವಂತ್ ಈಗ ಸುಧಾರಿಸಿಕೊಂಡಿದ್ದಾನೆ.
 
ಚಿಕ್ಕಮಗಳೂರಿನಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಬ್ಬ ಮಹಿಳೆ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿತ್ತು. ಬಸ್‌ನಲ್ಲಿ 25ಕ್ಕೂ ಹೆಚ್ಚು ಜನರಿದ್ದರು.
 
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.
 
ದುರಂತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ  5 ಲಕ್ಷ ಪರಿಹಾರ ನೀಡಲಾಗುವುದು. ಶವ ಸಂಸ್ಕಾರಕ್ಕೆ 15 ಸಾವಿರ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments