Webdunia - Bharat's app for daily news and videos

Install App

ಮಹಿಳಾ ಮೀಸಲಾತಿಗಾಗಿ ನಡೆದ ಮಹಿಳಾ ಸಂಘಟನೆಯ ಪ್ರತಿಭಟನೆ

Webdunia
ಭಾನುವಾರ, 12 ಸೆಪ್ಟಂಬರ್ 2021 (20:20 IST)
ಶಾಸನ ಸಂಸತ್ ಸಭೆಗಳಲ್ಲಿ ಮಹಿಳಾ ಮೀಸಲಾತಿಗಾಗಿ ಆಗ್ರಹಿಸಿ ಇಂದು ದಿನಾಂಕ 12.9.2022 ರಂದು ಬೆಂಗಳೂರಿನ ಬಂಡಿರೆಡ್ಡಿ ವೃತ್ತದಲ್ಲಿ ಹಕ್ಕೊತ್ತಾಯ ಬಹಿರಂಗ ಸಭೆ ನಡೆಸಲಾಯಿತು. 1996 ರಿಂದ ಮಸೂದೆಯನ್ನು ನೆನೆಗುದಿಗೆ ತಳ್ಳಲಾಗಿದೆ. ಬಿಜೆಪಿ ಪಕ್ಷವು ಪಾರ್ಲಿಮೆಂಟಿನಲ್ಲಿ ಪೂರ್ಣ ಬಹುಮತ ಹೊಂದಿದೆ. ತನಗೆ ಅನುಕೂಲಕರ ಕಾಯ್ದೆಗಳನ್ನು ಚರ್ಚೆಗೂ ಆಸ್ಪದ ಕೊಡದೆ ಪಾಸು ಮಾಡಿಕೊಂಡಿದೆ. ಆದರೆ ಮಹಿಳಾ ಮೀಸಲಾತಿ ಮಸೂದೆಯನ್ನು ಮಾತ್ರ ನೆನೆಗುದಿಗೆ ತಳ್ಳಿದೆ. ಈಗ ಸವಾಲು ಕೇಂದ್ರ ಸರಕಾರದ ಮುಂದಿದೆ.  ನೀತಿ ನಿರೂಪಣೆಯಲ್ಲಿ ಮಹಿಳಾ ಭಾಗಿದಾರಿಕೆಯು ನಾಡಿನ ಸಮಗ್ರ ಅಭಿವೃದ್ಧಿಗಾಗಿನ ಅವಶ್ಯಕತೆಯಾಗಿದೆ. ಮಹಿಳಾ ಮೀಸಲಾತಿಯು ನಿಜದ ಅಭಿವೃದ್ಧಿಯ ಸಂಕೇತವಾಗಿದೆ. ಈ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಜಾರಿ ಮಾಡಬೇಕೆಂದು ರಾಷ್ಟ್ರದ್ಯಾಂತ ಹೋರಾಟಕ್ಕೆ ಕರೆ ನೀಡಲಾಗಿತ್ತು. ಇದರ ಭಾಗವಾಗಿ  ಬೆಂಗಳೂರಿನಲ್ಲಿ ಹೋರಾಟ ನಡೆಯಿತು. 
 
ಈ ಪ್ರತಿಭಟನೆ ಯಲ್ಲಿ ರಾಜ್ಯದ್ಯಕ್ಷರಾದ ದೇವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಗೌರಮ್ಮ. ರಾಜ್ಯ ಉಪಾಧ್ಯಕ್ಷರಾದ ಕೆ.ನೀಲಾ.ಕೆ.ಎಸ್.ಲಕ್ಷ್ಮಿ. ಡಾ.ಮೀನಾಕ್ಷಿ ಬಾಳಿಯವರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments