Select Your Language

Notifications

webdunia
webdunia
webdunia
webdunia

ಮಹಿಳೆಯರು ಅಡುಗೆ ಮನೆಗೆ ಸೀಮಿತಾ ಹೇಳಿಕೆ: ಕೈ ಶಾಸಕ ಶಾಮನೂರು ವಿರುದ್ಧ ಸೈನಾ ಗರಂ

ಮಹಿಳೆಯರು ಅಡುಗೆ ಮನೆಗೆ ಸೀಮಿತಾ ಹೇಳಿಕೆ: ಕೈ ಶಾಸಕ ಶಾಮನೂರು ವಿರುದ್ಧ ಸೈನಾ ಗರಂ

Sampriya

ಬೆಂಗಳೂರು , ಶನಿವಾರ, 30 ಮಾರ್ಚ್ 2024 (16:46 IST)
Photo Courtesy X
ಬೆಂಗಳೂರು:  ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ವಿರುದ್ಧ ನೀಡಿದ ಹೇಳಿಕೆ ಬಗ್ಗೆ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ಕಿಡಿಕಾರಿದ್ದಾರೆ.  

 ಜಿಲ್ಲೆಯ ಬಂಟ್ಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ ಅವರು, ಎದುರಾಳಿ ಅಭ್ಯರ್ಥಿಗೆ ಜನರ ಮಧ್ಯೆ ಮಾತನಾಡಲು ಸಹ ಬರುವುದಿಲ್ಲ. ಅವರು ಕೇವಲ ಅಡುಗೆ ಮಾಡಲು ಮಾತ್ರ ಲಾಯಕ್ಕು. ಲೋಕಸಭೆ ಚುನಾವಣೆಯಲ್ಲಿ ಜನಬೆಂಬಲ ಪಡೆಯುವ ಮುನ್ನ ಅವರು ದಾವಣಗೆರೆಯ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲಿ ಎಂದಿದ್ದರು. ಈ ಹೇಳಿಕೆ ಬಗ್ಗೆ ಬಿಜೆಪಿಯವರು ಹಾಗೂ ಮಹಿಳೆಯರು ವಿರೋಧ ವ್ಯಕ್ತ ಪಡಿಸಿದ್ದರು.

ಎಕ್ಸ್‌ ಖಾತೆಯಲ್ಲಿ ಮಹಿಳೆಯರ ಪರ ಧ್ವನಿ ಎತ್ತಿದ ಸೈನಾ ನೆಹ್ವಾಲ್:

ಮಹಿಳೆಯನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಬೇಕು! ಇದು ಕರ್ನಾಟಕದ ಅಗ್ರಮಾನ್ಯ ನಾಯಕ ಶಾಮನೂರು ಶಿವಶಂಕರಪ್ಪ ಜೀ ಅವರು ಹೇಳಿರುವುದು. ‘ಲಡಕಿ ಹೂಂ, ಲಾಡ್ ಶಕ್ತಿ ಹೂಂ’ ಎಂದು ಹೇಳುವ ಪಕ್ಷದಿಂದ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೀ ಅವರನ್ನು ಕನಿಷ್ಠ ನಿರೀಕ್ಷೆಯಲ್ಲಿದ್ದಾರೆ ಅಂತ ಶಾಮನೂರು ವಿರುದ್ಧ ಸೈನಾ ಕಿಡಿಕಾರಿದ್ದಾರೆ.

ಮಹಿಳೆಯರ ಬಗ್ಗೆ ಹಾಗೆ ಯಾಕೆ ಹೇಳಬೇಕು?
ನಾನು ಮೈದಾನದಲ್ಲಿ ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಬಯಸಿತ್ತು? ಎಲ್ಲಾ ಹುಡುಗಿಯರು ಮತ್ತು ಮಹಿಳೆಯರು ತಮಗೆ ಇಷ್ಟವಾದ ಯಾವುದೇ ಕ್ಷೇತ್ರದಲ್ಲಿ ಮಹತ್ವವಾದುದನ್ನು ಸಾಧಿಸಬೇಕು ಎಂದು ಕನಸು ಕಾಣುತ್ತಿರುವಾಗ ಹಾಗೆ ಏಕೆ ಹೇಳಬೇಕು ಅಂತ ಸೈನಾ ಕಿಡಿಕಾರಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಎಂದು ನಂಬಿಸಿ ಯುವತಿಯ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ