Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧ ಮಹಿಳೆ ಹತ್ಯೆ

ಅನೈತಿಕ ಸಂಬಂಧ ಮಹಿಳೆ ಹತ್ಯೆ
ಬೆಂಗಳೂರು , ಮಂಗಳವಾರ, 28 ಡಿಸೆಂಬರ್ 2021 (15:53 IST)

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸೂರು ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ದ ಅರ್ಚನಾ ರೆಡ್ಡಿ, ಎಚ್‌ಎಸ್‌ಆರ್ ಲೇಔಟ್ ಮನೆಗೆ ತೆರಳಿದ್ದರು. ಈ ವೇಳೆ ಹೊಸೂರು ರೋಡ್ ಜಂಕ್ಷನ್ ಸಮೀಪ ಕಾರು ನಿಲ್ಲಿಸಿ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂತೋಷ್ ಮತ್ತು ನವೀನ್ ಎಂಬುವರು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಮಾರ್ಗಸೂಚಿಯಲ್ಲಿ ಪರಿಷ್ಕರಣೆ