Select Your Language

Notifications

webdunia
webdunia
webdunia
webdunia

ಹೆಣ್ಣು ಮಗು ಹೆತ್ತಿದ್ದಕ್ಕೆ ಕೊಲೆ: ನಾಲ್ವರ ಬಂಧನ

ಹೆಣ್ಣು ಮಗು ಹೆತ್ತಿದ್ದಕ್ಕೆ ಕೊಲೆ: ನಾಲ್ವರ ಬಂಧನ
ಬೆಳಗಾವಿ , ಸೋಮವಾರ, 8 ಫೆಬ್ರವರಿ 2016 (09:27 IST)
ಹೆಣ್ಣುಮಗು ಹೆತ್ತಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುರ್ಲಿ ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆ 25 ವರ್ಷದ ಶೀವಲೀಲಾ ವಾಳಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಹೆಣ್ಣು ಮಗುವನ್ನು ಹೆತ್ತಿದ್ದಾಳೆ ಎಂಬ ಕಾರಣಕ್ಕೆ ತಮ್ಮ ಮಗಳನ್ನು ಆಕೆಯ ಪತಿಯ ಮನೆಯವರು ಉಸಿರುಗಟ್ಟಿಸಿ ಸಾಯಿಸಿದ್ದಾರೆ ಎಂದು ಶೀವಲೀಲಾ ಪೋಷಕರು ನಿನ್ನೆ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
 
ಈ ದೂರಿನ ಆಧಾರದ ಮೇಲೆ ಪೊಲೀಸರು ಮೃತಳ ಪತಿ, ಬಿಎಸ್ಎಫ್ ಯೋಧ ಪತಿ ಸ್ವಪ್ನಿಲ್, ಮಾವ ಸುಭಾಶ್, ಅತ್ತೆ ಶುಭಾ ಮತ್ತು ವಾರಗಿತ್ತಿ ಅರ್ಚನಾಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ. 
 
ಮೃತಳು ಕಳೆದ ನಾಲ್ಕೈದು ದಿನಗಳ ಹಿಂದೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು ಎಂದು ತಿಳಿದು ಬಂದಿದೆ. 

Share this Story:

Follow Webdunia kannada