Webdunia - Bharat's app for daily news and videos

Install App

ಬಿಎಸ್ ಯಡಿಯೂರಪ್ಪ ಮೇಲೆ ಕೇಸ್ ಹಾಕಿದ ಮಹಿಳೆ ಮಾನಸಿಕವಾಗಿ ಅಸ್ವಸ್ಥೆ: ಸಿಟಿ ರವಿ

Krishnaveni K
ಶುಕ್ರವಾರ, 14 ಜೂನ್ 2024 (15:05 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕೆ ಈ ಕೇಸನ್ನು ಬಳಸುವ ಅನುಮಾನ ವ್ಯಕ್ತವಾಗಿದೆ. ಹಾಗಿಲ್ಲದೆ ಇದ್ದರೆ 3 ತಿಂಗಳ ಕಾಲ ಇಲ್ಲದ ಜೀವ ಈಗ ಯಾಕೆ ಬಂತು? ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು? ದೂರುದಾರೆಯು ಈ ಥರ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಮಾನ್ಯ ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು. ‘ಮಾನಸಿಕವಾಗಿ ಸ್ವಲ್ಪ..’ ಎಂದು ಹೇಳಿಕೆ ನೀಡಿದ್ದರು ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ದೂರಿಗೆ ಸಂಬಂಧಿಸಿ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ವಿವರಿಸಿದರು. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದುದಾಗಿ ಆರೋಪಿಸಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು ಎಂದು ತಿಳಿಸಿದರು.
ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇವತ್ತು ಹೈಕೋರ್ಟ್ ಮುಂದೆ ಮೊಕದ್ದಮೆ ಬರಲಿದ್ದು, ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದರು. ಯಡಿಯೂರಪ್ಪ ಅವರ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments