Webdunia - Bharat's app for daily news and videos

Install App

ಬೇಸಿಗೆಯಲ್ಲಿ ಹೆಲ್ಮೆಟ್ ಬೇಡ ಎಂದ ಮಹಿಳೆಯರು!

Webdunia
ಶುಕ್ರವಾರ, 8 ಮಾರ್ಚ್ 2019 (18:57 IST)
ಬೇಸಿಗೆ ಕಾಲದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯದಿಂದ ರಿಯಾಯಿತಿ ನೀಡಬೇಕೆಂದು ಒತ್ತಾಯ ಕೇಳಿಬಂದಿದೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಮಹಿಳೆಯರು ಜಿಲ್ಲಾರಕ್ಷಣಾಧಿಕಾರಿಗಳಿಗೆ ಹೀಗಂತ ಮನವಿ ಸಲ್ಲಿಸಿದ್ದಾರೆ.  ಜಿಲ್ಲಾ ಎಸ್.ಪಿ. ಕಚೇರಿಗೆ ಭೇಟಿ ನೀಡಿದ ಮಹಿಳೆಯರು, ಬೇಸಿಗೆ ಕಾಲದಲ್ಲಿ, ತಾಪಮಾನ ಹೆಚ್ಚಾಗಲಿದ್ದು ಹೆಲ್ಮೆಟ್ ಧರಿಸಿದರೆ ಸೆಖೆಯಿಂದಾಗಿ, ಅನೇಕ ಖಾಯಿಲೆಗಳು ಬರುವ ಸಂಭವವಿದೆ.  ಉತ್ತರ ಕರ್ನಾಟಕ ಮಾದರಿಯಲ್ಲಿ ನಮ್ಮಲ್ಲಿಯೂ ಬೇಸಿಗೆ ಕಾಲದಲ್ಲಿ ಹೆಲ್ಮೆಟ್ ನಿಂದ ರಿಯಾಯಿತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. 

ಈಗಿನ್ನು ಚಳಿಗಾಲ ಮುಗಿದು ಬೇಸಿಗೆ ಆರಂಭವಾಗಿದೆ.  ಈಗಲೇ ವಿಪರೀತ ಬಿಸಿಲಿದೆ. ಜಿಲ್ಲೆಯಾದ್ಯಂತ ರಸ್ತೆ ಅಭಿವೃದ್ಧಿ, ಖಾಸಗಿ ಲೇಔಟ್ ಸರ್ಕಾರಿ ಲೆಔಟ್ ಹೆಸರಿನಲ್ಲಿ ಸಾಕಷ್ಟು ಮರಗಳ ಕಡಿತವಾಗಿವೆ. ಕಾಡು ಕೂಡ ನಾಶವಾಗಿದ್ದು, ವಿಪರೀತ ಬಿಸಿಲಿಗೆ ಇವೆಲ್ಲವೂ ಕಾರಣವಾಗಿವೆ. ಈಗಲೇ ಹೆಚ್ಚು ಬಿಸಿಲಿದೆ.  ಹೀಗಾಗಿ ಬೇಸಿಗೆ ಕಾಲದಲ್ಲಿ ಹೆಲ್ಮೆಟ್ ನಿಂದ ಕಡ್ಡಾಯ ಆದೇಶ ರದ್ದುಗೊಳಿಸಿ ಆದೇಶ ಹೊರಡಿಸಬೇಕು. 

ಹೆಲ್ಮೆಟ್ ಧರಿಸುವುದು, ಕಾನೂನು ಪಾಲನೆ ಮಾಡುವುದು ಕರ್ತವ್ಯವಾಗಿದ್ದರೂ ಕೂಡ ಬೇಸಿಗೆ ಮುಗಿಯುವವರೆಗೂ ಹೆಲ್ಮೆಟ್ ಧರಿಸುವಿಕೆಗೆ ರಿಯಾಯಿತಿ ನೀಡಬೇಕೆಂದು ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ.  ಜಿಲ್ಲಾ ಎಸ್.ಪಿ. ಮೂಲಕ, ಗೃಹ ಸಚಿವರಿಗೂ ಕಾಂಗ್ರೆಸ್ ನ ಮಹಿಳೆಯರು ಮನವಿ ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments