Select Your Language

Notifications

webdunia
webdunia
webdunia
webdunia

ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿ ಮಾಡಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ

ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿ ಮಾಡಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ
ಬೆಂಗಳೂರು , ಶುಕ್ರವಾರ, 19 ಅಕ್ಟೋಬರ್ 2018 (07:19 IST)
ಬೆಂಗಳೂರು : ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ನಂತರ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಆರ್​ಆರ್ ನಗರದ ಬಳಿ ನಡೆದಿದೆ.


ರಾಘವೇಂದ್ರ ಶಾಸ್ತ್ರಿ ಅಲಿಯಾಸ್​ ರಘು ಪೊಲೀಸರಿಗೆ ಶರಣಾಗಿರುವ ಆರೋಪಿ. ಇತ ವಿವಾಹಿತನಾಗಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಆದರೆ ಇತ ನೈಸ್ ರಸ್ತೆ ಬಳಿ ವಾಸವಿರುವ ವಿವಾಹಿತ ಮಹಿಳೆಯೊಬ್ಬಳ ಜೊತೆ ದೈಹಿಕ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ದೈಹಿಕ ಸಂಬಂಧಕ್ಕೆ ನಿರಾಕರಿಸುತ್ತಿರುವುದರಿಂದ ಇವರಿಬ್ಬರ ನಡುವೆ ಜಗಳ ನಡೆದಿದೆ.


ಒಂದು ದಿನ  ರಘ ಹಣ ಕೊಡುವುದಾಗಿ ಆಕೆಯನ್ನು ಕರೆದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ, ಅದಕ್ಕೆ  ಆಕೆ ಒಪ್ಪದಾಗ ಆಕೆಯ ಎದೆ, ಹೊಟ್ಟೆಗೆ 10ಕ್ಕೂ ಹೆಚ್ಚು ಬಾರಿ ಚುಚ್ಚಿದ್ದಾನೆ. ನಂತರ ಚಾಕುವನ್ನು ಅಲ್ಲೇ ಬಿಟ್ಟು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇತ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಬೆಂಗಳೂರಿನ ವ್ಯಕ್ತಿ ಅರೆಸ್ಟ್