Webdunia - Bharat's app for daily news and videos

Install App

ಮಹಿಳೆಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಲೋಕಸಭೆ ಸಭಾಪತಿ

Webdunia
ಶುಕ್ರವಾರ, 6 ಜನವರಿ 2017 (14:17 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ರಕ್ಷಣೆ ಎಲ್ಲರ ಜವಾಬ್ದಾರಿಯಾಬೇಕಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಬೇರೆಡೆಯೂ ನಡೆದಿವೆ. ಗ್ರಾಮೀಣ ಪ್ರದೇಶದಲ್ಲಿಯೂ ಸಹ ಇಂತಹ ಪ್ರಕರಣಗಳು ಕಂಡು ಬಂದಿವೆ. ಮಹಿಳೆಯರನ್ನು ಗೌರವಿಸುವುದನ್ನು ಮಕ್ಕಳಿಗೆ ಕಲಿಸಿಕೊಡುವುದು ಅವಶ್ಯವಾಗಿದೆ ಎಂದರು.
 
ನಮ್ಮೆಲರ ಮನಸ್ಥಿತಿಗಳು ಬದಲಾಗಬೇಕಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುಲು ಸರಕಾರ ಹಾಗೂ ಪೊಲೀಸ್ ಇಲಾಖೆ ಶ್ರಮಿಸಿದರೆ ಸಾಲದು. ಬದಲಾಗಿ ಜನತೆಯೂ ಸಹ ಶ್ರಮಿಸಬೇಕಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಕರೆ ನೀಡಿದ್ದಾರೆ.
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರು ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ