Webdunia - Bharat's app for daily news and videos

Install App

ಅವಘಡ: ನೆಲಕ್ಕಪ್ಪಳಿಸಿತು ಕೊಟ್ಟೂರೇಶ್ವರ ತೇರು

Webdunia
ಬುಧವಾರ, 22 ಫೆಬ್ರವರಿ 2017 (08:51 IST)
ಕೊಟ್ಟೂರು: ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಗುರು ಕೊಟ್ಟೂರೇಶ್ವರನ ತೇರು ಮುರಿದು ಬಿದ್ದು ಭಾರಿ ಅನಾಹುತ ಸಂಭವಿಸಿದ್ದು, ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.  ಉತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂಥ ದುರ್ಘಟನೆ ನಡೆದಿದೆ.

ವಾರ್ಷಿಕ ಜಾತ್ರೆ ನಿಮಿತ್ತ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಯತ್ಸವದ ವೇಳೆ ಶ್ರೀ ಕೊಟ್ಟೂರು ಸ್ವಾಮಿಯ ರಥೋತ್ಸವ ಸಂಜೆಯ ಹೊತ್ತು ನಡೆದಿತ್ತು. ರಥೋತ್ಸವದ ಗಮ್ಯ ತಲುಪಿ ವಾಪಸಾಗುವಾಗ ಈ ಘಟನೆ ನಡೆದಿದೆ. 
 
ದೇವಸ್ಥಾನದಿಂದ ಸುಮಾರು ಮುನ್ನೂರು ಅಡಿ, ಇನ್ನೊಂದು ತುದಿಯಲ್ಲಿರುವ ಬಸವನ ದೇವಸ್ಥಾನಕ್ಕೆ ತಲುಪಿ ಮರಳುವಾಗ ಈ ಘಟನೆ ಸಂಭವಿಸಿದೆ. ಲಕ್ಷಾಂತರ ಜನರು ಸೇರಿದ್ದರಿಂದ ಕಾರ್ಯಾಚರಣೆ ನಡೆಸಲು ತೊಂದರೆಯಾಗಿತಗತು. ಸ್ಥಳಕ್ಕೆ ಅಂಬ್ಯುಲನ್ಸ್ ಆಗಮಿಸಿತ್ತಾದರೂ ಜನರ ಮಧ್ಯೆ ತೂರಿ ಹೋಗಲು ಸಾಧ್ಯವಾಗಿರಲಿಲ್ಲ. ರಥದ ಅಡಿಗೆ ಸಿಲುಕಿರುವ ಹಲವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
 
ಸ್ಥಳದಲ್ಲಿ ಡಿವೈಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಇದ್ದು ಕಾರ್ಯಾಚರಣೆ ನಡೆಸಿದ್ದಾರೆ.
 
ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ರಾಮ್‌ಪ್ರಸಾದ್‌ಮನೋಹರ್‌ ಸ್ಪಷ್ಟ ಪಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments