ಬಿಎಸ್ವೈಗೆ ಆಡಿಯೋ ಸಂಕಷ್ಟ ದೂರ ಮಾಡಲು ನಡೆಯಿತು ಪೂಜೆ!

Webdunia
ಬುಧವಾರ, 13 ಫೆಬ್ರವರಿ 2019 (15:43 IST)
ಆಪರೇಷನ್ ಕಮಲ ಆಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಯಡಿಯೂರಪ್ಪನವರಿಗೆ ಸಂಕಷ್ಟ ತಂದೊಡ್ಡಿದ್ದರೆ, ಇತ್ತ ಬಿಎಸ್ವೈ ಗೆ ಸಂಕಷ್ಟಗಳು ಬರದೇ ಇರಲಿ ಎಂದು ಗ್ರಹಗತಿಗಳ ಶಾಂತಿಗೆ ಪೂಜೆ ಸಲ್ಲಿಸಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಡ್ಯ ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿಎಸ್‌ವೈ ಹೆಸರಲ್ಲಿ ಅರ್ಚನೆಯನ್ನು ಕಾರ್ಯಕರ್ತರು ಮಾಡಿಸಿದ್ದಾರೆ.

ಪೂಜೆ ಬಳಿಕ ಅಷ್ಟ ದಿಕ್ಕುಗಳಲ್ಲೂ ತಡೆ ಹೊಡೆದು ಗ್ರಹಗತಿಗಳಿಗೆ ಶಾಂತಿ ಮಾಡಿಸಲಾಯಿತು.  ಪ್ರಮುಖವಾಗಿ ಹಾಸನದ ಮೂರು ಗ್ರಹಗಳು, ಕನಕಪುರದ ಎರಡು ಗ್ರಹಗಳು, ಮೈಸೂರಿನ ಒಂದು ಗ್ರಹಗಳಿಗೆ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಕಾರ್ಯಕರ್ತರು ಕಾಲೆಳೆದಿದ್ದಾರೆ.

ಮೈತ್ರಿಕೂಟ ನಾಯಕರ ವಿರುದ್ಧ ಗರಂ ಆಗಿರುವ ಕಾರ್ಯಕರ್ತರು, ಆಡಿಯೋ ಪ್ರಕರಣದಿಂದ ಮುಕ್ತವಾಗಿ ಬಿ.ಎಸ್. ಯಡಿಯೂರಪ್ಪ ಶೀಘ್ರ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments