Webdunia - Bharat's app for daily news and videos

Install App

ರಾಜ್ಯದಲ್ಲಿಂದು ಆಂಜನೇಯನ ದೇಗುಲಗಳಲ್ಲಿ ರಾಮನ ಆರಾಧನೆ

Webdunia
ಭಾನುವಾರ, 10 ಏಪ್ರಿಲ್ 2022 (07:01 IST)
ಬೆಂಗಳೂರು : ನಾಡಿನೆಲ್ಲೆಡೆ ಇಂದು ರಾಮನವಮಿ ಸಂಭ್ರಮ.

ರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲು ಬೆಂಗಳೂರಿನಾದ್ಯಂತ ಸಿದ್ಧತೆ ಮಾಡಲಾಗಿದ್ದು, ರಥಯಾತ್ರೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜಧಾನಿ ಎಲ್ಲೆಡೆ ಇಂದು ರಾಮ ನಾಮ ಭಜನೆ ಜಪಿಸಲಿದೆ. ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿದೆ. ಇಡೀ ದಿನ ಭಕ್ತರು ಉಪವಾಸ ಇದ್ದು ವ್ರತ ಮಾಡಿ ಪಾನಕ, ಕೋಸಂಬರಿ, ಮಜ್ಜಿಗೆ ಸೇವಿಸಿದರೆ ಶುಭ ಆಗುತ್ತೆ ಅನ್ನೋ ನಂಬಿಕೆಯಿದೆ.

ಒಂದೆಡೆ ದೇವಾಲಯಗಳಲ್ಲಿ ಜೈ ರಾಮ ಭಜನೆ ಮೊಳಗುತ್ತಿದ್ರೇ ಮತ್ತೊಂದೆಡೆ ರಾಮನವಮಿ ಅಂಗವಾಗಿ ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೋರಮಂಗಲದ ಎರಡನೇ ಕ್ರಾಸ್ ನಿಂದ ಸಂಜೆ 4 ಗಂಟೆಯಿಂದ ಆರಂಭವಾಗಲಿದೆ.

ಇನ್ನೊಂದೆಡೆ ವಿಶ್ವ ಹಿಂದೂ ಪರಿಷದ್ ಹೆಬ್ಬಾಳ ಘಟಕದಿಂದಲೂ ರಾಮರಥ ಯಾತ್ರೆ ಶೋಭಾ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ರಥಯಾತ್ರೆ ಸಂಜೆ 4 ಕ್ಕೆ ಅಶ್ವಥನಗರದಿಂದ ಆರಂಭವಾಗಿ ಸಂಜಯನಗರ ಮುಖ್ಯರಸ್ತೆಯ ಮೂಲಕ ಸಾಗಿ ಭೂಪಸಂದ್ರದಲ್ಲಿ ಕೊನೆಯಾಗುವುದು.

ಇತ್ತ ಇಂದಿನಿಂದ 2 ದಿನಗಳ ಕಾಲ ಗಾಳಿ ಆಂಜನೇಯ, ಸ್ಯಾಟಲೈಟ್ ಬಸ್ ನಿಲ್ದಾಣದ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧವಿದೆ. 2 ದಿನಗಳ ಕಾಲ ಗಾಳಿ ಆಂಜನೇಯ ದೇಗುಲದಲ್ಲಿ ರಥೋತ್ಸವ ನಡೆಯಲಿದ್ದು, 2 ದಿನ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments