ಲಾಭದಾಯಕ ಹುದ್ದೆ ಹೊಂದಿರುವ ಆರೋಪದ ಮೇಲೆ ಗೃಹ ಸಚಿವ ಡಾ.ಪರಮೇಶ್ವರ್ ವಿರುದ್ಧ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸ್ಥಾನದಿಂದ ಅನರ್ಹತೆ ಕೋರಿ ಬೆಂಗಳೂರಿನ ಶಶಿಧರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ.
ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹ ಸಚಿವರೂ ಆಗಿದ್ದಾರೆ. ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿದ್ದಾರೆ. ಅವರು ಲಾಭದಾಯಕ ಹುದ್ದೆಯನ್ನು ಹೊಂದಿರುವುದರಿಂದ ಸಚಿವ ಸ್ಥಾನದಲ್ಲಿರಲು ಅನರ್ಹರಾಗಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.
ಈ ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ನಡೆಸಿದ ಕೋರ್ಟ್ ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂದೂಡಿದೆ.