Select Your Language

Notifications

webdunia
webdunia
webdunia
webdunia

ಹೆಚ್.ವಿಶ್ವನಾಥ್ ಗೆ ಪತ್ರ ಬರೆದೋರಾರು?

ಹೆಚ್.ವಿಶ್ವನಾಥ್ ಗೆ ಪತ್ರ ಬರೆದೋರಾರು?
ಬೆಂಗಳೂರು , ಗುರುವಾರ, 20 ಜೂನ್ 2019 (16:42 IST)
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹೆಚ್.ವಿಶ್ವನಾಥ್ ಗೆ ಮಾಜಿ ಸಂಸದ ಪತ್ರ ಬರೆದಿದ್ದಾರೆ.

ಹುಣಸೂರು ಕ್ಷೇತ್ರದ ಶಾಸಕರಾಗಿರುವ ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷರು. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಪತ್ರ ಬರೆದಿದ್ದಾರೆ.

ಹೆಚ್.ಡಿ.ದೇವೇಗೌಡರು, ಹೆಚ್.ವಿಶ್ವನಾಥ್ ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ. ಹೀಗಾಗಿ ‘ಹಳ್ಳಿ ಹಕ್ಕಿ ಜೆಡಿಎಸ್ ನಲ್ಲಿ ರಾಜ್ಯದ ಅಧ್ಯಕ್ಷರಾಗಿಯೇ ಮುಂದುವರಿಯಬೇಕು’ ಹೀಗಂತ ಎಲ್.ಆರ್.ಶಿವರಾಮೇಗೌಡ ಪತ್ರದಲ್ಲಿ ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಮುಂದುವರಿಯಬೇಕು. ಹೀಗಂತ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಕಾಣಲು ಸಾಧ್ಯವಾಗಿತ್ತು. ಹೀಗಾಗಿ ಫಲಿತಾಂಶದ ನಂತರ ಹೆಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

 


Share this Story:

Follow Webdunia kannada

ಮುಂದಿನ ಸುದ್ದಿ

ಮೈತ್ರಿ ಸರಕಾರ ಪತನಕ್ಕೆ ಮುಂದುವರಿದ ಯತ್ನ