ರಾಯಭಾರಿ ಆದಲ್ಲಿ ಅಭಿವೃದ್ಧಿಗೆ ಒತ್ತು ನೀಡುವೆ ಎಂದ ಯದುವೀರ್!

Webdunia
ಬುಧವಾರ, 6 ಫೆಬ್ರವರಿ 2019 (15:19 IST)
ರಾಜಕೀಯಕ್ಕೆ ಬರುವ ಕುರಿತು ಸದ್ಯಕ್ಕೆ ಯಾವ ಆಸಕ್ತಿಯೂ ಇಲ್ಲ. ಹೀಗಂತ ಯದುವೀರ್ ಒಡೆಯರ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮೈಸೂರು ಮಹಾಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದು, ಮೈಸೂರು ಮಹಾಸಂಸ್ಥಾನಕ್ಕೆ‌ ಎಲ್ಲಾ ಪಕ್ಷಗಳ ಮುಖಂಡರು ಸೌಜನ್ಯಯುತ ಭೇಟಿ ನೀಡುತ್ತಿರುತ್ತಾರೆ. ಮೊದಲಿನಿಂದಲೂ ಸೌಜನ್ಯಯುತವಾಗಿ ಎಲ್ಲಾ ಪಕ್ಷದ ಮುಖಂಡರು ಭೇಟಿ ನೀಡುತ್ತಿರುತ್ತಾರೆ ಎಂದರು.  

ರಾಜಕೀಯ ಕ್ಷೇತ್ರದ ಹೊರತಾಗಿಯೂ ಸಮಾಜ ಸೇವೆಯನ್ನು ಮಾಡಬಹುದು. ರಾಜಕೀಯಕ್ಕೆ ಬಂದೇ ಸಮಾಜದ ಸೇವೆ ಮಾಡಬೇಕು ಎಂದೇನಿಲ್ಲ. ಈಗಾಗಲೇ ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಲಾಗುತ್ತಿದೆ ಎಂದರು.

ಕಲಬುರಗಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಹೇಳಿಕೆ ನೀಡಿದ್ದಾರೆ. ತಮ್ಮನ್ನು ಪ್ರವಾಸೋದ್ಯಮ ಇಲಾಖೆಯ ರಾಯಭಾರಿ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಯಭಾರಿ ಆಗಿದ್ದೇ ಆದಲ್ಲಿ ಕಲಬುರಗಿ ಭಾಗದ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ಕಲಬುರಗಿಯ ಕೋಟೆ, ದರ್ಗಾ ವಿಶಿಷ್ಟವಾಗಿದ ಪ್ರೇಕ್ಷಣೀಯ ಸ್ಥಳಗಳಾಗಿವೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments