Webdunia - Bharat's app for daily news and videos

Install App

ಅಕ್ರಮ ಕೋಟಿ ಹಣ ಯಡ್ಡಿಗೆ ಗೊತ್ತು; ರಾಜ್ಯ ರಾಜಕೀಯದಲ್ಲಿ ಬಿರುಗಾಳಿ

Webdunia
ಮಂಗಳವಾರ, 25 ಅಕ್ಟೋಬರ್ 2016 (15:01 IST)
ಬೆಂಗಳೂರು: ವಿಧಾನ ಸೌಧದ ಆವರಣದಲ್ಲಿ ಅನುಮಾನಾಸ್ಪದವಾಗಿ ಸಾಗಣಿಕೆಯಾಗುತ್ತಿದ್ದ 2.5 ಕೋಟಿ ರು. ಕುರಿತು ಯಡಿಯೂರಪ್ಪರಿಗೆ ಸಂಪೂರ್ಣ ಮಾಹಿತಿಯಿದೆ ಎನ್ನುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಹೇಳೀಕೆ ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸುವ ಲಕ್ಷಣಗಳು ಕಂಡು ಬರುತ್ತಿವೆ.
 

 
ಕಳೆದ ಶುಕ್ರವಾರ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಗೇಟ್ ಬಳಿ ವಕೀಲ ಸಿದ್ದಾರ್ಥ ಎಂಬಾತರು ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಹಣ ಸಾಗಿಸುತ್ತಿದ್ದರು. ಪೊಲೀಸರು ಅವರನ್ನು ತಡೆದು ಪರಿಶೀಲನೆಗೆ ಒಳಪಡಿಸಿದಾಗ, ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಎನ್ನುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೇ ವೇಳೆ ಕುಮಾರಸ್ವಾಮಿ, 'ವಿಧಾನಸೌಧದ ಆವರಣದಲ್ಲಿ ದೊರೆತಿರುವ ಹಣದ ಬಗ್ಗೆ ಯಡಿಯೂರಪ್ಪನವರಿಗೆ ಸಂಪೂರ್ಣವಾಗಿ ತಿಳಿದಿದೆ ಎಂದು ನನಗೆ ಗೊತ್ತು. ಈ ಹಣ ಯಾರಿಂದ ಯಾರಿಗೆ ಹೋಗುತ್ತಿತ್ತು ಎಂಬ ಎಲ್ಲ ಮಾಹಿತಿಗಳು ಯಡಿಯೂರಪ್ಪನವರನ್ನು ಹೊರತುಪಡಿಸಿ ಬೇರೆ ಯಾರಿಗೂ ಗೊತ್ತಿಲ್ಲ. ಇದಕ್ಕಿಂತ ಹೆಚ್ಚು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆದರೆ ಎಲ್ಲವೂ ಬಹಿರಂಗವಾಗುತ್ತದೆ' ಎಂದು ಹೇಳುವ ಮೂಲಕ ಕುಮಾರಸ್ವಾಮಿ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ.
 
ಮೇಲ್ನೋಟಕ್ಕೆ ಇದು ಜೆಡಿಎಸ್ ಮತ್ತು ಬಿಜೆಪಿಯ ರಾಜಕೀಯದ ಕೆಸರೆರಚಾಟ ಎಂದೆನಿಸಿದರೂ, ಸೂಕ್ಷ್ಮವಾಗಿ ಅವಲೋಕಿಸಿದರೆ ಯಾವುದೂ ಅಲ್ಲಗಳೆಯುವಂತಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅನುಭವಿ ರಾಜಕಾರಣಿ ಕುಮಾರಸ್ವಾಮಿ ಮತ್ತೊಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಅನುಭವಿ ರಾಜಕಾರಣಿ ಯಡಿಯೂರಪ್ಪರ ವಿರುದ್ಧ ಇಷ್ಟೊಂದು ಸಲೀಸಾಗಿ ಆರೋಪ ಮಾಡುತ್ತಾರೆ ಎಂದರೆ ಅದಕ್ಕೇನಾದರೂ ಸತ್ಯದ ಲೇಪವಿರಬಹುದೇ ಎನ್ನುವುದು ಸದ್ಯದ ಪ್ರಶ್ನೆ.
 
ಯಡಿಯೂರಪ್ಪರ ವಿರುದ್ಧ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಬೆಂಬಲಿಗರು ಆರೋಪಿಸುತ್ತಿದ್ದಾರೆಯೇ ಹೊರತು, ಬಿಜೆಪಿಯ ಇನ್ನಿತರ ಮುಖಂಡರು ಆ ಕುರಿತು ಯಾವೊಂದು ಪ್ರತಿಕ್ರಿಯೆ ನೀಡಲು ಮುಂದಾಗುತ್ತಿಲ್ಲ. ಸ್ವತಃ ಯಡಿಯೂರಪ್ಪರೇ ಯಾವ ಮಾತನ್ನೂ ಆಡದೆ ಮೌನಕ್ಕೆ ಶರಣಾಗಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ. ಇದು ಕುಮಾರಸ್ವಾಮಿಯ ಹೇಳಿಕೆಗೆ ಪರೋಕ್ಷವಾಗಿ ಇಂಬು ನೀಡುವಂತಿದ್ದರೂ ಯಾವುದೂ ಸತ್ಯವಲ್ಲ ಎನ್ನುವುದು ಗಮನಿಸಬೇಕು.
 
ಇವುಗಳ ನಡುವೆಯೇ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಪ್ರಾಥಮಿಕ ತನಿಖೆ ವೇಳೆ, ಟೆಂಡರ್ ಸಂಬಂಧ ಸಚಿವರೊಬ್ಬರಿಗೆ ನೀಡಲು ಹಣ ತರಲಾಗಿತ್ತು ಎನ್ನುವ ಮಾಹಿತಿ ಹೊರಬಿದ್ದಿದೆ. ಹಾಗಾದರೆ ಆ ಹಣ ಯಾರ ಮೂಲಕ, ಯಾವ ಸಚಿವರಿಗೆ ತಲುಪುವುದಾಗಿತ್ತು? ಎನ್ನುವುದು ಬಹಿರಂಗವಾಗಬೇಕಿದೆ. ರಾಜಕೀಯದಲ್ಲಿ ಯಾರು ಬೇಕಾದರ ಮಿತ್ರರಾಗಬಹುದು, ಯಾರು ಬೇಕಾದರೂ ಶತ್ರುಗಳಾಗಬಹುದು. ಶತ್ರುಗಳು ಸದಾ ತಮ್ಮ ಶತ್ರುಗಳ ವಿರುದ್ಧ ಕತ್ತಿಯನ್ನು ಮಸೆಯುತ್ತಲೂ ಇರಬಹುದು. ಸಿಕ್ಕ ಸಿಕ್ಕ ಪ್ರಕರಣವನ್ನು ಶತ್ರುಗಳ ತಲೆಗೆ ಕಟ್ಟಲೂ ಪ್ರಯತ್ನಿಸಬಹುದು. ರಾಜಕೀಯದ ಚದುರಂಗದಾಟದಲ್ಲಿ ಗೆಲುವೊಂದೇ ಅಂತಿಮ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರ ಆರೋಪ ಮಿಥ್ಯವೋ ಸತ್ಯವೋ... ರಾಜ್ಯ ರಾಜಕೀಯದಲ್ಲಂತೂ ಗಂಭಿರ ಚರ್ಚೆಗೆ ಇಂಬು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments