Webdunia - Bharat's app for daily news and videos

Install App

ಯಾದಗಿರಿಯಲ್ಲಿ ಪ್ರಚೋದನಾಕಾರಿ ಭಾಷಣ: ತೆಲಂಗಾಣ ಶಾಸಕನ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 15 ಡಿಸೆಂಬರ್ 2017 (16:56 IST)
ಯಾದಗಿರಿ: ಯಾದಗಿರಿಯಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿರುವುದರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ. 
ಶ್ರೀರಾಮ ಸೇನೆ ಮಂಗಳವಾರ ಸಂಜೆ ಆಯೋಜಿಸಿದ್ದ ಹಿಂದೂ ವಿರಾಟ್ ಸಮಾವೇಶದಲ್ಲಿ ರಾಜಾಸಿಂಗ್ ಠಾಕೂರ್, ಆಕ್ಷೇಪಾರ್ಹ ಭಾಷಣ ಮಾಡಿದ್ದ. ಹಿಂದೂ ವಿರಾಟ್ ಸಮಾವೇಶದಲ್ಲಿ ಪ್ರತಿಯೊಬ್ಬ ಹಿಂದೂ ಲಾಠಿ, ತಲವಾರ್ ಇಟ್ಟುಕೊಂಡಿರಬೇಕು ಅಂತ ಹೇಳಿಕೆ ನೀಡಿದ್ದ.‌ ಈಗ ವಿವಾದದ ಕಿಡಿ ಹೊತ್ತಿಸಿದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಲಿದೆ.
 
ಕೋಮುದಳ್ಳುರಿಯಲ್ಲಿ ಕರಾವಳಿ ಪ್ರದೇಶ ನಲಗುತ್ತಿದ್ದರೆ ಆ ಕಿಡಿ ನಿಧಾನವಾಗಿ ಹೈದ್ರಾಬಾದ್ ಪ್ರದೇಶಕ್ಕೆ ವ್ಯಾಪಿಸುವ ಲಕ್ಷಣಗಳು ಗೋಚರಿಸುತ್ತಿವೆ.  ಶ್ರೀ ರಾಮ ಸೇನೆಯಿಂದ  ಯಾದಗಿರಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್ ಪ್ರತಿಯೊಬ್ಬ ಹಿಂದುಗಳ ಮನೆಯಲ್ಲಿ ಲಾಠಿ, ತಲವಾರ್ ಇರಬೇಕು. ಅಗತ್ಯಬಿದ್ದರೆ ಹಿಂದೂ ಧರ್ಮ ವಿರೋಧಿಗಳ ತಲೆ ಕಡಿಯಬೇಕೆಂದು ಠಾಕೂರ್ ಕರೆ ನೀಡಿದ್ದರು.
 
ಧಾರ್ಮಿಕ ಭಾವನೆ ಕೆರಳಿಸಿದ ಬಿಜೆಪಿ ಶಾಸಕನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಸಮಾವೇಶದಲ್ಲಿ ತಲ್ವಾರ್ ಪ್ರದರ್ಶನ ಮಾಡಿ ಕಾನೂನು ಉಲ್ಲಂಘಿಸಲಾಗಿತ್ತು.
 
 ಈ ಕುರಿತು ಪ್ರತಿಕ್ರಿಯಿಸಿರುವ ಈಶಾನ್ಯ ವಲಯ ಐಜಿಪಿ ರಾಜಾಸಿಂಗ್ ಠಾಕೂರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ವಿಚಾರಣೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಬಂಧಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಐಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
 
 ಸಮಾವೇಶದಲ್ಲಿ ಖಡ್ಗಗಳನ್ನು ಹಿಡಿದು ಪ್ರದರ್ಶನ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಐಜಿಪಿ ತಿಳಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕೋಮುಭಾವನೆ ಕೆರಳಿಸೋಕೆ ಮುಂದಾದ ಶಾಸಕನ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ‌. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments