Select Your Language

Notifications

webdunia
webdunia
webdunia
webdunia

ರಾಜ್ಯಪಾಲ ವಜುಬಾಯಿ ಭೇಟಿ ಮಾಡಿದ ಯಡಿಯೂರಪ್ಪ

ರಾಜ್ಯಪಾಲ ವಜುಬಾಯಿ ಭೇಟಿ ಮಾಡಿದ ಯಡಿಯೂರಪ್ಪ
ಬೆಂಗಳೂರು , ಗುರುವಾರ, 18 ಸೆಪ್ಟಂಬರ್ 2014 (12:28 IST)
ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ ಯಡಿಯೂರಪ್ಪ ಡಿನೋಟಿಫಿಕೇಶನ್ ಹಗರಣ ಮತ್ತಿತರ ವಿಷಯಗಳನ್ನು ಕುರಿತು ಚರ್ಚಿಸಿದ್ದಾರೆಂದು ತಿಳಿದುಬಂದಿದೆ. ತಾವು ರಾಜಕೀಯ ಉದ್ದೇಶದಿಂದ ರಾಜ್ಯಪಾಲರನ್ನು ಭೇಟಿಯಾಗಿಲ್ಲ.

ಅವರನ್ನು ಸೌಹಾರ್ದಯುತ ಭೇಟಿ ಮಾಡಿದ್ದಾಗಿ ಯಡಿಯೂರಪ್ಪ ತಿಳಿಸಿದರು. ಯಡಿಯೂರಪ್ಪ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಅವರಿಗೆ ಕೇಂದ್ರದಲ್ಲಿ ಯಾವುದೇ ಸಚಿವ ಪದವಿ ನೀಡಿರಲಿಲ್ಲ. ಆ ಸಂದರ್ಭದಲ್ಲಿ ತಾವು ರಾಜ್ಯ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದರು.

ಆದರೆ ಯಡಿಯೂರಪ್ಪನವರಿಗೆ ಬಿಜೆಪಿ ಉಪಾಧ್ಯಕ್ಷ ಹುದ್ದೆಯನ್ನು ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತೆ ಅವರಿಗೆ ಪರೋಕ್ಷ ಸೂಚನೆಯನ್ನು ಹೈಕಮಾಂಡ್ ನೀಡಿದೆ. 

Share this Story:

Follow Webdunia kannada