Webdunia - Bharat's app for daily news and videos

Install App

ಯಡಿಯೂರಪ್ಪ, ಈಶ್ವರಪ್ಪ ವರ್ತನೆಯಿಂದ ಪಕ್ಷಕ್ಕೆ ಮುಜುಗುರ: ಸದಾನಂದಗೌಡ

Webdunia
ಸೋಮವಾರ, 16 ಜನವರಿ 2017 (14:12 IST)
ನಮ್ಮ ಪಕ್ಷದ ಇಬ್ಬರೂ ನಾಯಕರು ಬಹಿರಂಗವಾಗಿಯೇ ಕಿತ್ತಾಡುತ್ತಿದ್ದಾರೆ. ಇಂದರಿಂದ ಖಂಡಿತ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮುಜುಗುರ ಉಂಟಾಗಿರುತ್ತದೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಇದೇ ರೀತಿಯ ವರ್ತನೆಯನ್ನು ಮುಂದುವರೆಸಿದರೆ ಪಕ್ಷಕ್ಕೆ ನಷ್ಟವಾಗುವುದು ಖಚಿತ ಎಂದರು.
 
ರಾಜ್ಯ ಬಿಜೆಪಿಯಲ್ಲಿರುವ ಗೊಂದಲಗಳ ಕುರಿತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಐದು ರಾಜ್ಯಗಳ ಚುನಾವಣೆಯಲ್ಲಿ ರಾಷ್ಟ್ರೀಯ ನಾಯಕರು ಬ್ಯುಸಿಯಾಗಿದ್ದಾರೆ. ಚುನಾವಣೆ ಬಳಿಕ ಇತ್ತ ಗಮನ ಹರಿಸಲಿದ್ದಾರೆ ಎಂದು ತಿಳಿಸಿದರು.
 
ಜನವರಿ 19 ರಂದು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಈ ವೇಳೆ 24 ಶಾಸಕರು ಬರೆದ ಪ್ರೇಮ ಪತ್ರದ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿ ಕೇಂದ್ರ ಸಚಿವ ಸದಾನಂದಗೌಡ ಅವರು ಮಾರ್ಮಿಕವಾಗಿ ನಗೆ ಬೀರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments