Webdunia - Bharat's app for daily news and videos

Install App

ಎಸಿಬಿ ಎಫ್`ಐಆರ್ ರದ್ದು ಕೋರಿ ಬಿಎಸ್`ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Webdunia
ಬುಧವಾರ, 30 ಆಗಸ್ಟ್ 2017 (17:50 IST)
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ ಎಫ್`ಐಆರ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ನಾಳೆಗೆ ಮುಂದೂಡಿದೆ.

ನಾಳೆ ಮಧ್ಯಾಹ್ನ 3 ಗಂಟೆಗೆ ಅರ್ಜಿ ವಿಚಾರಣೆ ಮುಂದೂಡಿರುವ ಹೈಕೋರ್ಟ್, ಅಲ್ಲಿಯವರೆಗೂ ಯಡಿಯೂರಪ್ಪನವರನ್ನ ಬಂಧಿಸದಂತೆ ಮತ್ತು ಎಸಿಬಿ ತನಿಖೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ಯಡಿಯೂರಪ್ಪ ವಿರುದ್ಧ 2 ಎಫ್ಐಆರ್ ದಾಖಲಾಗಿವೆ.

ಇತ್ತ, ಈಶ್ವರಪ್ಪ ಪಿಎ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್ ನಿರೀಕ್ಷಣಾ ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ಸಹ ಮುಂದಕ್ಕೆ ಹೋಗಿದೆ. ಸೆಪ್ಟೆಂಬರ್ 3ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ಸಿವಿಲ್ ಕೋರ್ಟ್ ಆದೇಶಿಸಿದೆ. ಸಂತೋಷ್ ಸಹಚರರು ನೋಡಿರುವ ಹೇಳಿಕೆ ಆಧರಿಸಿ ನಿರೀಕ್ಷಣಾ ಜಾಮಿನು ವಜಾಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.       

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments