Webdunia - Bharat's app for daily news and videos

Install App

ಏಕತಾ ಸಮಾವೇಶದಲ್ಲಿ ಯಡಿಯೂರಪ್ಪ-ಈಶ್ವರಪ್ಪ ದೋಸ್ತಿ

Webdunia
ಭಾನುವಾರ, 27 ನವೆಂಬರ್ 2016 (18:55 IST)
ಬೆಂಗಳೂರು: ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಂದಾಗ ಮುನಿಸಿಕೊಂಡು ಕುಳಿತರೆ ಹೇಗೆ? ಹಾಗಾಗಿ ಅರಮನೆ ಮೈದಾನದಲ್ಲಿ ನಡೆದ ಏಕತಾ ಸಮಾವೇಶದಲ್ಲಿ ರಾಜ್ಯ ಬಿಜೆಪಿ ನಾಯಕರಾದ ಯಡಿಯೂರಪ್ಪ-ಈಶ್ವರಪ್ಪ ಮುನಿಸು ಮರೆತು ದೋಸ್ತಿಗಳಂತೆ ಪೋಸ್ ಕೊಟ್ಟಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸಿದ ಸಮಾವೇಶದ ವೇದಿಕೆಯಲ್ಲಿ ಇಬ್ಬರೂ ಇತರ ನಾಯಕರೊಂದಿಗೆ ನಗು ನಗುತ್ತಲೇ ಕಾಣಿಸಿಕೊಂಡರು. ಇದೇ ವೇಳೆ ಮಾತನಾಡಿದ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೊಡೆ ತಟ್ಟುತ್ತಿರುವ ವಿಪಕ್ಷಗಳ ಮೇಲೆ ಟೀಕೆಗಳ ಸುರಿಮಾಲೆ ಹರಿಸಿದರು.

ವಿಪಕ್ಷಗಳ ಕೆಲವು ನಾಯಕರ ಬಳಿ ಕಾಳಧನ ಬೇಕಾದಷ್ಟು ಇದೆಯೆಂದು ತೋರುತ್ತದೆ. ಅದಕ್ಕೇ ಅಂತಹವರು ನೋಟು ನಿಷೇಧವನ್ನು ವಿರೋಧಿಸುತ್ತಿದ್ದಾರೆ. ಇನ್ನು ಕೆಲವರಿಗೆ ಪ್ರಧಾನಿಯವರನ್ನು ತೆಗಳುವುದೇ ವೃತ್ತಿಯಾಗಿಬಿಟ್ಟಿದೆ ಎಂದು ವಿಪಕ್ಷಗಳ ಮೇಲೆ ಅಮಿತ್ ಶಾ ಕೆಂಡ ಕಾರಿದರು.

ಸಮಾನತಾ ಸಮಾವೇಶಕ್ಕಾಗಿ ದೂರದೂರುಗಳಿಂದಲೂ ಕಾರ್ಯಕರ್ತರನ್ನು ವಿಶೇಷ ವಾಹನ ವ್ಯವಸ್ಥೆ ಕಲ್ಪಿಸಿ ಮೈದಾನಕ್ಕೆ ಕರೆತರಲಾಗಿತ್ತು. ರಾಷ್ಟ್ರೀಯ ಅಧ್ಯಕ್ಷರು ಬರುವ ಹಿನ್ನಲೆಯಲ್ಲಿ ಮತ್ತು ನಾಳೆ ವಿಪಕ್ಷಗಳು ದೇಶದಾದ್ಯಂತ  ಆಕ್ರೋಶ್ ದಿವಸ್ ಆಚರಿಸುವುದರಿಂದಲೋ ಏನೋ, ಕಾರ್ಯಕರ್ತರಲ್ಲೂ ಉತ್ಸಾಹ ಇನ್ನಷ್ಟು ಹೆಚ್ಚಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments