Webdunia - Bharat's app for daily news and videos

Install App

ಸತತ 5 ಗಂಟೆ ಯಡಿಯೂರಪ್ಪ ಪಿಎ ಸಂತೋಷ್ ವಿಚಾರಣೆ

Webdunia
ಸೋಮವಾರ, 14 ಆಗಸ್ಟ್ 2017 (18:30 IST)
ಈಶ್ವರಪ್ಪ ಪಿಎ ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಅವರನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 5 ಗಂಟೆಗಳ ಕಾಲ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಬೈಲ್ ಸಂದೇಶಗಳು, ವ್ಯಕ್ತಿಗಳ ಪರಿಚಯದ ಬಗ್ಗೆ ಪೊಲೀಸರು ಸಂತೋಷ್ ಮುಂದೆ ಸಾಲು ಸಾಲು ಪ್ರಶ್ನೆಗಳನ್ನ ಇಟ್ಟಿದ್ದಾರೆ. ಇದೇವೇಳೆ, ನಗರದ ಪ್ರತಿಷ್ಠಿತ ಹೋಟೆಲ್`ನಲ್ಲಿ ರೂಮ್ ಬುಕ್ ಮಾಡಿದ್ದು ಯಾರಿಗಾಗಿ ಎಂಬ ಬಗ್ಗೆ ಪೊಲಿಸರು ಪ್ರಶ್ನಿಸಿದ್ದಾರೆ. ಪತ್ರಕರ್ತರಿಗೋಸ್ಕರ ರೂಮ್ ಬುಕ್ ಮಾಡಿದ್ದಾಗಿ ಸಂತೋಷ್ ಹೇಳಿರುವುದಾಗಿ ವರದಿಯಾಗಿದೆ.  ಹಾಗಾದರೆ ಆ ಪತ್ರಕರ್ತ ಯಾರು ಎಂಬ ಪ್ರಶ್ನೆ ಎದ್ದಿದೆ.

ನಿನ್ನೆ ಭಾನುವಾರವೂ ಬಿಡದೆ 7 ಗಂಟೆ ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿಗಳು ಇವತ್ತೂ 5 ಗಂಟೆ ತನಿಖೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನವೂ ವಿಚಾರಣೆಗೆ ಹಾಜರಾಗುವಂತೆ ಸೂಚಸಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments