Webdunia - Bharat's app for daily news and videos

Install App

6-7 ತಿಂಗಳ ಬಳಿಕ ಸಿದ್ದರಾಮಯ್ಯನನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ: ಯಡಿಯೂರಪ್ಪ

Webdunia
ಶುಕ್ರವಾರ, 18 ಆಗಸ್ಟ್ 2017 (13:23 IST)
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ ನಡೆಸುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್`ನಲ್ಲಿ ಹೋರಾಟದಲ್ಲಿ ತೊಡಗಿದ್ಧಾರೆ. ಈ ಸಂದರ್ಭ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಮೇಲೆ ಎಸಿಬಿಯಲ್ಲಿ ಇಲ್ಲಸಲ್ಲದ ಕೇಸ್ ದಾಖಲಿಸುವ ಮೂಲಕ ನಮ್ಮ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೀರಿ, ಆದರೆ, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶೋಭಾ ಕರಂದ್ಲಾಜೆ, ಅಶೋಕ್, ನನ್ನ ಹೆಸರನ್ನ ಹೇಳಿ ಬೆದರಿಸುವ ಯತ್ನ ಮಾಡುತ್ತಿದ್ದೀರಿ. ಇನ್ನೂ 6-7 ತಿಂಗಳು ನಿಮ್ಮ ಅಧಿಕಾರ ಇರುತ್ತೆ. ಇದಾದ ಬಳಿಕ ನಿಮ್ಮನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.




ಇದೇವೇಳೆ, ಕೇಂದ್ರದ ಅನುದಾನದ ಹಣದ ಲೆಕ್ಕ ಕೇಳಲು ನೀವ್ಯಾರು ಎಂದು ಸಿಎಂ ಸಿದ್ದರಾಮಯ್ಯ, ಅಮಿತ್ ಶಾ ವಿರುದ್ಧ ಮಾಡಿದ್ದ ಟೀಕೆ ಬಗ್ಗೆ ಕಿಡಿ ಕಾರಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯನವರೇ ಈ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಪ್ರಜೆಗೂ ಲೆಕ್ಕ ಕೇಳುವ ಅಧಿಕಾರ ಇದೆ ಎಂದು ಹೇಳಿದ್ದಾರೆ.  ಸಚಿವರಾದ ಡಿ.ಕೆ. ಶಿವಕುಮಾರ್, ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಿಸಬೇಕೆಂಬುದು ಈ ಹೋರಾಟದ ಉದ್ದೇಶ. ಅವರ ರಾಜೀನಾಮೆ ಪಡೆದರೆ ನನ್ನ ಬುಡಕ್ಕೇ ಬರುತ್ತೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments