ಕೊಡಗಿನಲ್ಲಿ ಕಾರ್ಯಕರ್ತರೊಂದಿಗೆ ಎಳನೀರು ಕುಡಿದು, ಊಟ ಸೇವಿಸಿದ ಯದುವೀರ್

Sampriya
ಶುಕ್ರವಾರ, 15 ಮಾರ್ಚ್ 2024 (19:15 IST)
Photo Courtesy Facebook
ಮಡಿಕೇರಿ: ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕಿಳಿದಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು  ಪ್ರಚಾರ ಕಾರ್ಯವಾಗಿ ಇಂದು ಕೊಡಗಿನಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರು ರಸ್ತೆ ಬದಿಯಲ್ಲಿ ಎಳನೀರು ಕುಡಿದು, ಕಾರ್ಯಕರ್ತರೊಂದಿಗೆ ಊಟ ಮಾಡಿದರು.
 
ಇದಕ್ಕೂ ಮುನ್ನ ಅವರು ಕುಶಾಲನಗರದ ಕೊಪ್ಪ‍ ಸೇತುವೆ ಬಳಿ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಮಡಿಕೇರಿಯಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.
 
ಪತ್ರಕರ್ತರೊಬ್ಬರು 'ರಾಜವಂಶಸ್ಥರು ಜನಸಾಮಾನ್ಯರ ಕೈಗೆ ಸಿಗುವುದಿಲ್ಲ' ಎಂಬ ಆರೋಪವಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಸಾರ್ವಜನಿಕ ಜೀವನಕ್ಕೆ ಬಂದ್ಮೇಲೆ ಎಲ್ಲರಿಗೂ ಲಭ್ಯರಾಗುವಂತೆ ಇರಬೇಕಾಗುತ್ತದೆ ಎಂದರು. 
 
ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಪ್ರತಾಪಸಿಂಹ ಅವರು ಈಗಾಗಲೇ ಶುಭಾಶಯ ಕೋರಿದ್ದು, ಮುಂಬರುವ ದಿನಗಳಲ್ಲಿ ಅವರೂ ಪ್ರಚಾರ ಕಾರ್ಯದಲ್ಲಿ ತೊಡಗುತ್ತಾರೆಂಬ ನಿರೀಕ್ಷೆಯಿದೆ. ಕಳೆದ 10 ವರ್ಷದಲ್ಲಿ ಪ್ರತಾಪ್ ಸಿಂಹ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುವುದಾಗಿ ಹೇಳಿದರು. 
 
ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯಲ್ಲಿ ಭಾಗಿಯಾದ ಅವರು 'ಪ್ರಕೃತಿಗೆ ಪೂರಕವಾದ ಅಭಿವೃದ್ಧಿ ಯೋಜನೆಗಳನ್ನು ಕೊಡಗಿನಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದರು.  ಈ ವೇಳೆ ಯದುವೀರ್ ಅವರ ಜತೆ ಕಾರ್ಯಕರ್ತರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಮುಂದಿನ ಸುದ್ದಿ
Show comments