Webdunia - Bharat's app for daily news and videos

Install App

ಅರಮನೆಯಲ್ಲಿ ಯದುವೀರ್ ಒಡೆಯರ್ ರಿಂದ ಸರಸ್ವತಿ ಪೂಜೆ

Webdunia
ಗುರುವಾರ, 28 ಸೆಪ್ಟಂಬರ್ 2017 (12:41 IST)
ಮೈಸೂರು: ನವರಾತ್ರಿಯ 7ನೇ ದಿನವಾದ ನಿನ್ನೆ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಮೈಸೂರು ಮಹಾ ಸಂಸ್ಥಾನದ ವಿದ್ಯಾದೇವಿ ಸರಸ್ವತಿಗೆ ಅಗ್ರ ಪೂಜೆ ಸಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರಸ್ವತಿಗೆ ಪೂಜೆ ಸಲ್ಲಿಸಿದರು.

ಆಯುಧ ಪೂಜೆಗೂ ಮುನ್ನವೇ ಮೈಸೂರು ಅಂಬಾವಿಲಾಸ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಮಹಾರಾಜರಿಂದ ಸರಸ್ವತಿ ಪೂಜೆ ನೆರವೇರುತ್ತೆ. ಈ ವೇಳೆ ಶ್ರೀ ದುರ್ಗೆ, ವಾಗ್ದೇವಿ, ವೀಣಾಪಾಣಿ, ಪುಸ್ತಕ ದಾರಿ, ಮಹಾಲಕ್ಷ್ಮಿ, ಮಹಾ ಸರಸ್ವತಿಯ ಅಗ್ರಪೂಜೆ ನವರಾತ್ರಿಯಲ್ಲಿ ಮಹಾರಾಜರು ನೆರವೇರಿಸುವುದು ವಿಶೇಷ.

ಸರಸ್ವತಿ ಪೂಜಾ ಕೈಂಕರ್ಯದಲ್ಲಿ ಮೈಸೂರು ಅರಸರ ಕುಲದೇವತೆ ಚಾಮುಂಡೇಶ್ವರಿ ದೇವಿ, ವಿಘ್ನ ನಿವಾರಕ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸರಸ್ವತಿ ಪೂಜೆ ಅಂಗವಾಗಿ ಸರಸ್ವತಿಯ ಭಾವಚಿತ್ರದ ಜತೆಗೆ ಅರಮನೆಯಲ್ಲಿರುವ ವೀಣೆಗಳು, ಪುರಾತನ ಕಾಲದ ಗ್ರಂಥ, ಹಸ್ತಪ್ರತಿಗಳಿಗೆ ಯದುವೀರ್‌ ಒಡೆಯರ್ ಅವರು ಪೂಜೆ ಸಲ್ಲಿಸಿದರು. ಬಳಿಕ, ಅಲಪೀಠ ಪೂಜೆ, ದ್ವಾರಪಾಲಕ ಪೂಜೆ, ಮಂಟಪ ಪೂಜೆಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಈ ವೇಳೆ ರಾಜಪುರೋಹಿತರು, ಅರಮನೆ ಪಂಡಿತರು ವೇದ, ಮಂತ್ರಘೋಷ ಹೇಳುವ ಮೂಲಕ ಶಾರದಾಂಬೆಯನ್ನು ಸ್ತುತಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments