Webdunia - Bharat's app for daily news and videos

Install App

ಅರಮನೆಯಲ್ಲಿ ಯದುವೀರ್ ಒಡೆಯರ್ ರಿಂದ ಸರಸ್ವತಿ ಪೂಜೆ

Webdunia
ಗುರುವಾರ, 28 ಸೆಪ್ಟಂಬರ್ 2017 (12:41 IST)
ಮೈಸೂರು: ನವರಾತ್ರಿಯ 7ನೇ ದಿನವಾದ ನಿನ್ನೆ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಮೈಸೂರು ಮಹಾ ಸಂಸ್ಥಾನದ ವಿದ್ಯಾದೇವಿ ಸರಸ್ವತಿಗೆ ಅಗ್ರ ಪೂಜೆ ಸಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರಸ್ವತಿಗೆ ಪೂಜೆ ಸಲ್ಲಿಸಿದರು.

ಆಯುಧ ಪೂಜೆಗೂ ಮುನ್ನವೇ ಮೈಸೂರು ಅಂಬಾವಿಲಾಸ ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಮಹಾರಾಜರಿಂದ ಸರಸ್ವತಿ ಪೂಜೆ ನೆರವೇರುತ್ತೆ. ಈ ವೇಳೆ ಶ್ರೀ ದುರ್ಗೆ, ವಾಗ್ದೇವಿ, ವೀಣಾಪಾಣಿ, ಪುಸ್ತಕ ದಾರಿ, ಮಹಾಲಕ್ಷ್ಮಿ, ಮಹಾ ಸರಸ್ವತಿಯ ಅಗ್ರಪೂಜೆ ನವರಾತ್ರಿಯಲ್ಲಿ ಮಹಾರಾಜರು ನೆರವೇರಿಸುವುದು ವಿಶೇಷ.

ಸರಸ್ವತಿ ಪೂಜಾ ಕೈಂಕರ್ಯದಲ್ಲಿ ಮೈಸೂರು ಅರಸರ ಕುಲದೇವತೆ ಚಾಮುಂಡೇಶ್ವರಿ ದೇವಿ, ವಿಘ್ನ ನಿವಾರಕ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸರಸ್ವತಿ ಪೂಜೆ ಅಂಗವಾಗಿ ಸರಸ್ವತಿಯ ಭಾವಚಿತ್ರದ ಜತೆಗೆ ಅರಮನೆಯಲ್ಲಿರುವ ವೀಣೆಗಳು, ಪುರಾತನ ಕಾಲದ ಗ್ರಂಥ, ಹಸ್ತಪ್ರತಿಗಳಿಗೆ ಯದುವೀರ್‌ ಒಡೆಯರ್ ಅವರು ಪೂಜೆ ಸಲ್ಲಿಸಿದರು. ಬಳಿಕ, ಅಲಪೀಠ ಪೂಜೆ, ದ್ವಾರಪಾಲಕ ಪೂಜೆ, ಮಂಟಪ ಪೂಜೆಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಈ ವೇಳೆ ರಾಜಪುರೋಹಿತರು, ಅರಮನೆ ಪಂಡಿತರು ವೇದ, ಮಂತ್ರಘೋಷ ಹೇಳುವ ಮೂಲಕ ಶಾರದಾಂಬೆಯನ್ನು ಸ್ತುತಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments