Select Your Language

Notifications

webdunia
webdunia
webdunia
webdunia

ಪ್ರತಾಪ ಸಿಂಹ ನನ್ನ ಸಹೋದರನಂತೆ ಎಂದ ಯದುವೀರ್ ಒಡೆಯರ್

Yaduveer Wadiyar

Krishnaveni K

ಬೆಂಗಳೂರು , ಗುರುವಾರ, 14 ಮಾರ್ಚ್ 2024 (17:10 IST)
Photo Courtesy: Twitter
ಬೆಂಗಳೂರು: ಮೈಸೂರಿನಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹಾಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾತನಾಡಿದ್ದಾರೆ.

ಈ ಬಾರಿ ಮತ್ತೊಮ್ಮೆ ಪ್ರತಾಪ್ ಸಿಂಹ ಮೈಸೂರಿನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಪಡೆಯುವ ಕನಸಿನಲ್ಲಿದ್ದರು. ಆದರೆ ಈ ಬಾರಿ ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿಲ್ಲ. ಬದಲಾಗಿ ಯದುವೀರ್ ಒಡೆಯರ್ ಗೆ ಮಣೆ ಹಾಕುತ್ತಿದೆ. ಇದೇ ಮೊದಲ ಬಾರಿಗೆ ಯದುವೀರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಬಂದ ಯದುವೀರ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಳಿಕ ಮಾತನಾಡಿರುವ ಅವರು ಪ್ರತಾಪ್ ಸಿಂಹ ನನ್ನ ಸಹೋದರನಿದ್ದಂತೆ. ಅವರು ಇದುವರೆಗೆ ಮೈಸೂರಿಗೆ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಬೆಂಬಲ ನನಗೆ ಇದೆ ಎಂದಿದ್ದಾರೆ.

ಪ್ರತಾಪ್ ಸಿಂಹ ಜೊತೆ ಯಾವಾಗಲೂ ಸಂಪರ್ಕದಲ್ಲಿದ್ದೆ. ಅವರ ಬೆಂಬಲ ನನಗಿರುತ್ತದೆ. ಮೈಸೂರಿನ ಅಭಿವೃದ್ಧಿಗೆ ಅವರು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ. ನಾನು ಜನರ ಜೊತೆ ಸಂಪರ್ಕದಲ್ಲಿದ್ದೆ. ಇದೀಗ ಜನರ ಋಣ ತೀರಿಸಲು ಅವಕಾಶ ಸಿಕ್ಕಿದೆ. ಅಧಿಕಾರವಿದ್ದರೆ ಕೆಲಸ ಮಾಡಲು ಸುಲಭವಾಗುತ್ತದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಆಯೋಗಕ್ಕೆ ಇಬ್ಬರು ಮುಖ್ಯಸ್ಥರು: ಅವರ ಹಿನ್ನಲೆ ವಿವರ ಇಲ್ಲಿದೆ