Webdunia - Bharat's app for daily news and videos

Install App

ಪ್ರತಾಪ ಸಿಂಹ ನನ್ನ ಸಹೋದರನಂತೆ ಎಂದ ಯದುವೀರ್ ಒಡೆಯರ್

Krishnaveni K
ಗುರುವಾರ, 14 ಮಾರ್ಚ್ 2024 (17:10 IST)
Photo Courtesy: Twitter
ಬೆಂಗಳೂರು: ಮೈಸೂರಿನಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹಾಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾತನಾಡಿದ್ದಾರೆ.

ಈ ಬಾರಿ ಮತ್ತೊಮ್ಮೆ ಪ್ರತಾಪ್ ಸಿಂಹ ಮೈಸೂರಿನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಪಡೆಯುವ ಕನಸಿನಲ್ಲಿದ್ದರು. ಆದರೆ ಈ ಬಾರಿ ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿಲ್ಲ. ಬದಲಾಗಿ ಯದುವೀರ್ ಒಡೆಯರ್ ಗೆ ಮಣೆ ಹಾಕುತ್ತಿದೆ. ಇದೇ ಮೊದಲ ಬಾರಿಗೆ ಯದುವೀರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಬಂದ ಯದುವೀರ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಳಿಕ ಮಾತನಾಡಿರುವ ಅವರು ಪ್ರತಾಪ್ ಸಿಂಹ ನನ್ನ ಸಹೋದರನಿದ್ದಂತೆ. ಅವರು ಇದುವರೆಗೆ ಮೈಸೂರಿಗೆ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಬೆಂಬಲ ನನಗೆ ಇದೆ ಎಂದಿದ್ದಾರೆ.

ಪ್ರತಾಪ್ ಸಿಂಹ ಜೊತೆ ಯಾವಾಗಲೂ ಸಂಪರ್ಕದಲ್ಲಿದ್ದೆ. ಅವರ ಬೆಂಬಲ ನನಗಿರುತ್ತದೆ. ಮೈಸೂರಿನ ಅಭಿವೃದ್ಧಿಗೆ ಅವರು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ. ನಾನು ಜನರ ಜೊತೆ ಸಂಪರ್ಕದಲ್ಲಿದ್ದೆ. ಇದೀಗ ಜನರ ಋಣ ತೀರಿಸಲು ಅವಕಾಶ ಸಿಕ್ಕಿದೆ. ಅಧಿಕಾರವಿದ್ದರೆ ಕೆಲಸ ಮಾಡಲು ಸುಲಭವಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments