ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದ ಸಮಯದಲ್ಲಿ ಅಮಾಯಕ ರೈತರ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ನೇತೃತ್ವದ ತಂಡ ಯಮನೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ನೇತೃತ್ವದ ತಂಡ ಯಮನೂರಿಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾದ ರೈತರು ಹಾಗೂ ಮಹಿಳೆಯರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ನೇತೃತ್ವದ ತಂಡ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ಪ್ರತಿ ಮನೆಗಳಿಗೂ ತೆರಳಿ ಸಂತ್ರಸ್ಥರಿಂದ ಮಾಹಿತಿಯನ್ನು ಪಡೆದುಕೊಂಡಿದ್ದು, ಗ್ರಾಮಸ್ಥರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಈ ವೇಳೆ ಧಾರವಾಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ಉಪಸ್ಥಿತರಿದ್ದರು.
ದೌರ್ಜನ್ಯಕ್ಕೊಳಗಾದ ರೈತರು ಹಾಗೂ ಮಹಿಳೆಯರಿಂದ ಮಾಹಿತಿ ಸಂಗ್ರಹಿಸಿಕೊಂಡು ಹೈಕೋರ್ಟ್ಗೆ ವರದಿ ಸಲ್ಲಿಸಲಾಗುತ್ತದೆ ಎಂದು ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.