Webdunia - Bharat's app for daily news and videos

Install App

ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಕ್ಷಮೆ ಕೋರಿದ ಪರಮೇಶ್ವರ್!

Webdunia
ಭಾನುವಾರ, 31 ಜುಲೈ 2016 (16:46 IST)
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರರು, ತಾಯಂದಿರು ಹಾಗೂ ಮಕ್ಕಳಿಗೆ ತೊಂದರೆಯಾಗಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಷಾದ ವ್ಯಕ್ತಪಡಿಸುವ ಮೂಲಕ ಕ್ಷಮೆಯಾಚಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ಪ್ರತಿಭಟನಾಕಾರರು ನವಲಗುಂದ ಹಾಗೂ ನರಗುಂದನಲ್ಲಿ ಸರಕಾರಿ ಕಚೇರಿಗಳನ್ನು ಧ್ವಂಸ ಮಾಡಿದ್ದಾರೆ. ಮಹದಾಯಿ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಚ್ ನಡೆದಿದೆ. ಪೊಲೀಸರು ಅಮಾನವೀಯತೆಯಿಂದ ವರ್ತಿಸಿದ್ದಾರೆಂದು ಮಾತು ಕೇಳಿ ಬಂದಿದೆ. ಘಟನೆಯಲ್ಲಿ ತಾಯಂದಿರು ಹಾಗೂ ಮಕ್ಕಳಿಗೆ ತೊಂದರೆಯಾಗಿದೆ. ಇದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದರು. 
 
ಪೊಲೀಸರು ಅಮಾನವೀಯತೆಯಿಂದ ವರ್ತಿಸಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಕಮಲಪಂತ್ ನೇತೃತ್ವದಲ್ಲಿ ತನಿಖೆ ನಡೆಸಿ, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡುತ್ತೇನೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಅಂದು ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ತೋರಿದ ಸಿದ್ದರಾಮಯ್ಯ ಈ ನಡೆ ಇಂದು ನಿನ್ನೆಯದಲ್ಲ: ವಿಜಯೇಂದ್ರ

ಸಾರ್ವಜನಿಕ ವೇದಿಕೆಯಲ್ಲೇ ಎಎಸ್‌ಪಿಗೆ ಹೊಡೆಯಲು ಮುಂದಾದ ಸಿಎಂ: ಸಿದ್ದರಾಮಯ್ಯ ಕೋಪಕ್ಕೆ ಭಾರೀ ಟೀಕೆ

Tejasvi Surya: ಪಕ್ಕದ ರಾಜ್ಯದಲ್ಲಿ ಆನೆ ತುಳಿದು ಸತ್ತವರಿಗೆ 20 ಲಕ್ಷ ರಾಜ್ಯ ಸರ್ಕಾರ ನಮ್ಮವರಿಗೆ ಕೊಡೋದು 10 ಲಕ್ಷ ಮಾತ್ರ

ಮುಂದಿನ ಸುದ್ದಿ
Show comments