Webdunia - Bharat's app for daily news and videos

Install App

ಯಮುನೆ ಆರ್ಭಟ: ದೆಹಲಿಯಲ್ಲಿ ಆತಂಕ

Webdunia
ಗುರುವಾರ, 17 ಆಗಸ್ಟ್ 2023 (17:20 IST)
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್​ನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ದೆಹಲಿ ಜನತೆಯ ಆತಂಕ ಹೆಚ್ಚಾಗಲು ಕಾರಣ ಯಮುನೆ. ಹೌದು, ಕಳೆದ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಯಮುನೆ ಅಪಾಯದ ಮಟ್ಟ ಮೀರಿ ಹರಿದು ದೆಹಲಿಗೆ ತನ್ನ ಪಾತ್ರವನ್ನ ತಿಳಿಸಿತ್ತು. ಇದೀಗ ಉತ್ತರದಲ್ಲಿ ಮತ್ತೆ ಮೇಘಸ್ಫೋಟವಾಗಿದ್ದು, ಯಮುನಾ ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾಗಿದೆ ಎಂದು ಕೇಂದ್ರ ಜಲ ಆಯೋಗ ಮಾಹಿತಿ ನೀಡಿದೆ. ಜಲ ಆಯೋಗದ ಮಾಹಿತಿ ಬಳಿಕ ಎಚ್ಚೆತ್ತ ದೆಹಲಿ ಸರ್ಕಾರ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚನೆ ನೀಡಿದೆ. ಜುಲೈನಲ್ಲಿ ಉಂಟಾದ ಸನ್ನಿವೇಶ ಮತ್ತೆ ಉದ್ಭವಿಸಬಾರದೆಂದು ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಮುನಾ ನದಿಯ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments