Webdunia - Bharat's app for daily news and videos

Install App

ಯದುವೀರ್ ಒಡೆಯರ್ ವಿರುದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ ಕಣಕ್ಕೆ

Krishnaveni K
ಶನಿವಾರ, 16 ಮಾರ್ಚ್ 2024 (10:33 IST)
Photo Courtesy: Twitter
ಮೈಸೂರು: ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಇತ್ತ ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಅತ್ತ ಕಾಂಗ್ರೆಸ್ ಯತೀಂದ್ರರನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ. ಸದ್ಯಕ್ಕೆ ಯತೀಂದ್ರ ಶಾಸಕರಾಗಿದ್ದಾರೆ. ಆದರೆ ಸಿದ್ದರಾಮಯ್ಯಗೆ ತಮ್ಮ ತವರು ಜಿಲ್ಲೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಡುವ ಹಠವಿದೆ. ಇದಕ್ಕಾಗಿ ಪುತ್ರನನ್ನೇ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ.

ಇನ್ನು, ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಯದುವೀರ್ ಚುನಾವಣಾ ಕೆಲಸ ಶುರು ಮಾಡಿದ್ದಾರೆ. ಜನರೊಂದಿಗೆ ಸಾಮಾನ್ಯನಂತೇ ಬೆರೆತು ಸ್ಥಳೀಯ ನಾಯಕರನ್ನೂ ಭೇಟಿಯಾಗಿ ವಿಶ್ವಾಸ ಗಿಟ್ಟಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜನರ ವಿಶ್ವಾಸ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಒಂದಡೆ ಯದುವೀರ್ ಚುನಾವಣಾ ಪ್ರಚಾರ ಕೆಲಸ ಶುರು ಮಾಡಿದ್ದರೆ ಇತ್ತ ಕಾಂಗ್ರೆಸ್ ನಲ್ಲಿ ಶೀಘ್ರವೇ ಮೈಸೂರು ಅಭ್ಯರ್ಥಿ ಘೋಷಣೆಗೆ ಒತ್ತಡ ಕೇಳಿಬಂದಿದೆ. ಅದರಲ್ಲೂ ಯದುವೀರ್ ಸೆಡ್ಡು ಹೊಡೆಯಲು ಯತೀಂದ್ರರೇ ತಕ್ಕ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕರ ಅಭಿಪ್ರಾಯ. ಅದಕ್ಕಾಗಿ ಅವರನ್ನೇ ಕಣಕ್ಕಿಳಿಸಲು ಒತ್ತಾಯ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments