ಆರ್ ಎಸ್ಎಸ್ ಗೆ ಹೇಳೋರು ಕೇಳೋರು ಇಲ್ಲ ಅಂತಾಗಿದೆ, ಇನ್ನು ನಮ್ಮ ಪರ್ಮಿಷನ್ ತಗೋಬೇಕು: ಯತೀಂದ್ರ ಸಿದ್ದರಾಮಯ್ಯ

Krishnaveni K
ಸೋಮವಾರ, 13 ಅಕ್ಟೋಬರ್ 2025 (09:44 IST)
ಮೈಸೂರು: ಆರ್ ಎಸ್ಎಸ್ ಗೆ ಹೇಳೋರು ಕೇಳೋರು ಯಾರೂ ಇಲ್ಲ ಎನ್ನುವಂತಾಗಿದೆ. ಇನ್ನು ಏನೇ ಕಾರ್ಯಕ್ರಮ ಮಾಡುವುದಿದ್ದರೂ ನಮ್ಮ ಅನುಮತಿ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಹೇಳಿಕೆ ನೀಡಿದ್ದಾರೆ.

ಆರ್ ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಂಘಟನೆ ವಿರುದ್ಧ ಮುಗಿಬಿದ್ದಿದ್ದಾರೆ. ಆರ್ ಎಸ್ಎಸ್ ಸಮಾಜದಲ್ಲಿ ಧ್ವೇಷ ಬಿತ್ತುವ ಸಂಘಟನೆ. ಹೀಗಾಗಿ ಅದರ ಕಾರ್ಯಕ್ರಮದ ಮೇಲೆ ನಿಯಂತ್ರಣ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.

ಇದರ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ‘ಯಾವುದೇ ಸಂಘಟನೆ ಸಾರ್ವಜನಿಕ ಸ್ಥಳಗಳಲ್ಲಿ ಬೈಠಕ್ ನಡೆಸಬೇಕಾದರೆ ಪೂರ್ವಾನುಮತಿ ಪಡೆಯಬೇಕು. ಆರ್ ಎಸ್ಎಸ್ ನವರು ಯಾವುದೇ ಪೂರ್ವಾನುಮತಿಯಿಲ್ಲದೇ ಕೆಲಸ ಮಾಡುತ್ತಾರೆ.ಯಾರೂ ಹೇಳೋರು ಕೇಳೋರು ಇಲ್ಲ ಎಂದು ಇಷ್ಟು ದಿನ ನಡೆದುಕೊಂಡು ಬಂದಿದ್ದಾರೆ. ಹೀಗಾಗಿ ಅದಕ್ಕೆ ಕಡಿವಾಣ ಹಾಕಬೇಕು’ ಎಂದು ಯತೀಂದ್ರ ಹೇಳಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸುಮ್ ಸುಮ್ನೇ ಸಭೆ ನಡೆಸುವುದು, ಸಮಾಜದಲ್ಲಿ ವಿಷಪೂರಿತ ಸಿದ್ಧಾಂತಗಳನ್ನು ಹರಡುವುದನ್ನು ಮಾಡಬಾರದು. ಇದಕ್ಕೆಲ್ಲಾ ಕಡಿವಾಣ ಹಾಕಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments